ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಆಂತರಿಕ ಕಿತ್ತಾಟ ಜೋರಾಗುತ್ತಿದಂತೆ ಶಮನ ಮಾಡಲು ಹೈಕಮಾಂಡ್ ಈಗ ಎಂಟ್ರಿಯಾಗುತ್ತಿದೆ. ನಾಳೆ ರಾಜ್ಯಕ್ಕೆ ಅಗಮಿಸಲಿರುವ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ ವಾಲ್ ಮೂರು ಪ್ರಮುಖ ಸಭೆಗಳನ್ನು ನಡೆಸಲಿದ್ದಾರೆ.
ಆರಂಭದಲ್ಲಿ ಮಧ್ಯಾಹ್ನ 3 ಗಂಟೆಗೆ ಶಾಸಕರು, ಸಂಸದರ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ಸಂಜೆ 4 ಗಂಟೆಗೆ ಸಂಘಟನೆ ಪರ್ವದ ಪರಿಶೀಲನೆ ನಡೆಯಲಿದೆ. ಜಿಲ್ಲಾಧ್ಯಕ್ಷ ಮತ್ತು ರಾಜ್ಯಾಧ್ಯಕ್ಷ ಚುನಾವಣೆ ಬಗ್ಗೆ ಚರ್ಚೆ ನಡೆಯಲಿದೆ.