ಸಂಗೀತ ಕ್ಷೇತ್ರದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ತಂತಿ ವಾದ್ಯ ತಯಾರಕ ಸತಾರಾಮೇಕರ್ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದಿಲ್ಲಿಯ ಸಾಂಗ್ಲಿ ಸಂಗೀತ ನಾಟಕ ಅಕಾಡೆಮಿ ಕೊಡಮಾಡುವ ಸಂಗೀತ ಕ್ಷೇತ್ರದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಗೆ ಮೀರಜ್​ನ ಹಿರಿಯ ತಂತಿ ವಾದ್ಯ ತಯಾರಕ ಮತ್ತು ಇಂಡಿಯನ್ ಸ್ಟ್ರಿಂಗ್ ಇನ್​ಸ್ಟ್ರುಮೆಂಟ್​ ಸೆಂಟರ್ ನಿರ್ದೇಶಕ ಮಜೀದ್ ಗುಲಾಬ್​ಸಾಹೇಬ್ ಸತಾರಾಮೇಕರ್ ಭಾಜನರಾಗಿದ್ದಾರೆ.

ಶೀಘ್ರದಲ್ಲೇ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಅವರು 1 ಲಕ್ಷ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಲಿದ್ದಾರೆ.

ಗುಲಾಬ್​ಸಾಹೇಬ್ ತಮ್ಮ ಸಂಗೀತ ಕ್ಷೇತ್ರದಲ್ಲಿ ಸಾಕಷ್ಟು ಹೆಗ್ಗಳಿಕೆ ಪಡೆದುಕೊಂಡಿದ್ದಾರೆ. ತಂತಿ ವಾದ್ಯ ತಯಾರಿಕೆಯಲ್ಲಿನ ಸುದೀರ್ಘ ಅನುಭವವನ್ನು ಗಮನದಲ್ಲಿಟ್ಟುಕೊಂಡು ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಇದು ಸಂಗೀತ ಕ್ಷೇತ್ರದಲ್ಲಿ ಅತ್ಯುನ್ನತ ಪ್ರಶಸ್ತಿ ಎಂದು ಪರಿಗಣಿಸಲ್ಪಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!