ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದಿಲ್ಲಿಯ ಸಾಂಗ್ಲಿ ಸಂಗೀತ ನಾಟಕ ಅಕಾಡೆಮಿ ಕೊಡಮಾಡುವ ಸಂಗೀತ ಕ್ಷೇತ್ರದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಗೆ ಮೀರಜ್ನ ಹಿರಿಯ ತಂತಿ ವಾದ್ಯ ತಯಾರಕ ಮತ್ತು ಇಂಡಿಯನ್ ಸ್ಟ್ರಿಂಗ್ ಇನ್ಸ್ಟ್ರುಮೆಂಟ್ ಸೆಂಟರ್ ನಿರ್ದೇಶಕ ಮಜೀದ್ ಗುಲಾಬ್ಸಾಹೇಬ್ ಸತಾರಾಮೇಕರ್ ಭಾಜನರಾಗಿದ್ದಾರೆ.
ಶೀಘ್ರದಲ್ಲೇ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಅವರು 1 ಲಕ್ಷ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಲಿದ್ದಾರೆ.
ಗುಲಾಬ್ಸಾಹೇಬ್ ತಮ್ಮ ಸಂಗೀತ ಕ್ಷೇತ್ರದಲ್ಲಿ ಸಾಕಷ್ಟು ಹೆಗ್ಗಳಿಕೆ ಪಡೆದುಕೊಂಡಿದ್ದಾರೆ. ತಂತಿ ವಾದ್ಯ ತಯಾರಿಕೆಯಲ್ಲಿನ ಸುದೀರ್ಘ ಅನುಭವವನ್ನು ಗಮನದಲ್ಲಿಟ್ಟುಕೊಂಡು ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಇದು ಸಂಗೀತ ಕ್ಷೇತ್ರದಲ್ಲಿ ಅತ್ಯುನ್ನತ ಪ್ರಶಸ್ತಿ ಎಂದು ಪರಿಗಣಿಸಲ್ಪಟ್ಟಿದೆ.