GOOD NEWS | ಬರೋಬ್ಬರಿ 5 ವರ್ಷ ಬಳಿಕ ಆರಂಭ ಆಗ್ತಿದೆ ಪವಿತ್ರ ಕೈಲಾಸ ಮಾನಸ ಸರೋವರ ಯಾತ್ರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೊರೋನಾ ಭೀತಿಯಿಂದಾಗಿ ಸ್ಥಗಿತವಾಗಿದ್ದ ಮಾನಸ ಸರೋವರ ಯಾತ್ರೆ ಇದೀಗ ಮತ್ತೆ ಪುನರಾರಂಭವಾಗಿದೆ. ಇದೇ ಜೂನ್ 30 ರಿಂದ ಯಾತ್ರೆ ಮತ್ತೆ ಪುನರಾರಂಭವಾಗಲಿದೆ.

Manasa Sarovara 159 | prasad.srinivasan | Flickrಉತ್ತರಾಖಂಡ ಸರ್ಕಾರ ಮತ್ತು ಭಾರತೀಯ ವಿದೇಶಾಂಗ ಸಚಿವಾಲಯದ ಆಶ್ರಯದಲ್ಲಿ ಯಾತ್ರೆ ಬಗ್ಗೆ ಮಾಹಿತಿ ನೀಡಲಾಗಿದೆ. ಕೈಲಾಸ ಮಾನಸ ಸರೋವರ ಯಾತ್ರೆಯು ಉತ್ತರಾಖಂಡದ ಪಿಥೋರಗಢ ಜಿಲ್ಲೆಯಲ್ಲಿ 17,000 ಅಡಿ ಎತ್ತರದಲ್ಲಿರುವ ಲಿಪುಲೇಖ್ ಪಾಸ್ ಮೂಲಕ ಹಾದು ಹೋಗಲಿದೆ.

Best Time to Visit Kailash Mansarovar Yatra: A Seasonal Breakdown ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸ ಪರ್ವತವು ಶಿವನ ವಾಸಸ್ಥಾನವಾಗಿದ್ದು, ಮತ್ತು ಅದನ್ನು ಪ್ರದಕ್ಷಿಣೆ ಹಾಕಿ ಮಾನಸ ಸರೋವರದಲ್ಲಿ ಸ್ನಾನ ಮಾಡುವುದರಿಂದ ಮೋಕ್ಷ ಸಿಗುತ್ತದೆ ಎಂದು ನಂಬಲಾಗಿದೆ. ಪ್ರತಿ ವರ್ಷ ಆಯೋಜಿಸಲಾಗುತ್ತಿದ್ದ ಈ ಯಾತ್ರೆಯನ್ನು 2020 ರಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಮುಂದೂಡಲಾಯಿತು ಮತ್ತು ಅಂದಿನಿಂದ ಅದನ್ನು ನಡೆಸಲು ಸಾಧ್ಯವಾಗಲಿಲ್ಲ. ಜೂನ್ 30 ರಂದು ದೆಹಲಿಯಿಂದ ಯಾತ್ರೆ ಪ್ರಾರಂಭವಾಗಲಿದ್ದು, ತಲಾ 50 ಜನರ ಐದು ಗುಂಪುಗಳಿದ್ದು, ಒಟ್ಟು 250 ಭಕ್ತರು ಭಾಗವಹಿಸಲಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!