ಪತ್ನಿಯ ರೀಲ್ಸ್ ಹುಚ್ಚಾಟಕ್ಕೆ ಬೇಸತ್ತು ಬರ್ಬರವಾಗಿ ಕೊಲೆ ಮಾಡಿದ ಪತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪತಿಯೋರ್ವ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕೋಟದಲ್ಲಿ ನಡೆದಿದೆ.

ಜಯಶ್ರೀ (31) ಹತ್ಯೆಗೊಳಗಾದವರು. ಕಿರಣ್ ಉಪಾಧ್ಯ ತನ್ನ ಪತ್ನಿಯನ್ನು ಕತ್ತಿಯಿಂದ ಕಡಿದು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.
ಈ ದಂಪತಿ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇಂದು ಮುಂಜಾನೆ ಪತಿ ಕಿರಣ್ ಉಪಾಧ್ಯರಿಂದ ಪತ್ನಿ ಜಯಶ್ರೀಯ ಹತ್ಯೆ ನಡೆದಿದೆ.

ಹೆಂಡತಿಯ ಹತ್ಯೆ ಮಾಡಿ ಮನೆಯಲ್ಲೇ ಕೂತಿದ್ದ ಪತಿ ಕಿರಣ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮೃತ ಜಯಶ್ರೀ ಸದಾ ಮೊಬೈಲ್‌ನಲ್ಲಿ ಬ್ಯುಸಿ ಇರುತ್ತಿದ್ದರಂತೆ. ರೀಲ್ಸ್ ಮಾಡೋ ಹುಚ್ಚು ಇದ್ದ ಜಯಶ್ರೀ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವಿಡಿಯೋಗಳನ್ನು ಪೋಸ್ಟ್‌ ಮಾಡಿದ್ದರು. ಪತ್ನಿಯ ಈ ಮೊಬೈಲ್‌ ಗೀಳು ಪತಿ, ಪತ್ನಿಯ ನಡುವೆ ಆಗಾಗ ಜಗಳಕ್ಕೆ ಕಾರಣವಾಗಿತ್ತು. ಗಂಡ, ಹೆಂಡತಿ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಅದು ಕೊಲೆಯಲ್ಲಿ ಅಂತ್ಯವಾಗಿರೋ ಅನುಮಾನ ವ್ಯಕ್ತವಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!