ಮುಸ್ಲಿಮರಿಂದ ಕೆತ್ತಿದ ದೇವತಾ ಮೂರ್ತಿ ಪೂಜೆಗೆ ಯೋಗ್ಯವಲ್ಲ: ಸಿದ್ದಲಿಂಗ ಶ್ರೀ ಹೇಳಿಕೆ

ಹೊಸದಿಗಂತ ವರದಿ, ಕಲಬುರಗಿ
ಮುಸ್ಲಿಮರಿಂದ ಕೆತ್ತಿದ ಮೂರ್ತಿಗಳು ಪೂಜೆಗೆ ಯೋಗ್ಯವಲ್ಲ. ಒಂದು ವೇಳೆ ಅವರು ಕೆತ್ತಿದ್ದರೆ ಅವುಗಳನ್ನು ಪ್ರತಿಷ್ಠಾಪಿಸಬಾರದು ಎಂದು ಶ್ರೀ ರಾಮಸೇನೆ ರಾಜ್ಯ ಗೌರವಾಧ್ಯಕ್ಷ, ಆಂದೋಲಾ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೇಲುಕೋಟೆಯಲ್ಲಿ ಮುಸ್ಲಿಮರು ದೇವರ ಮೂರ್ತಿ ಕೆತ್ತನೆ ವಿಚಾರ ತಿಳಿದಿರಲಿಲ್ಲ. ವಿಶ್ವಕರ್ಮ ಸಮಾಜದವರು ಶಾಸ್ತ್ರೋಕ್ತವಾಗಿ ಮೂರ್ತಿ ಕೆತ್ತನೆ ಮಾಡುತ್ತಾರೆ. ಆದರೆ, ಮುಸ್ಲಿಮರು ಯಾವುದೇ ರೀತಿಯಿಂದ ಶಾಸ್ತ್ರೋಕ್ತವಾಗಿ ಕೆತ್ತನೆ ಮಾಡೋದಿಲ್ಲ. ಹೀಗಾಗಿ ಮುಸ್ಲಿಮರು ಕೆತ್ತನೆ ಮಾಡೋ ಮೂರ್ತಿಗಳನ್ನು ಪ್ರತಿಷ್ಟಾಪಿಸಬಾರದು ಎಂದರು.
ಒಂದುವೇಳೆ ಪ್ರತಿಷ್ಟಾಪಿಸಿದರೂ ಆ ಮೂರ್ತಿಗಳಿಂದ ಯಾವುದೇ ಫಲ ಸಿಗುವುದಿಲ್ಲ. ಮುಸ್ಲಿಮರು ಕೆತ್ತಿದ ಮೂರ್ತಿಗಳನ್ನು ಬ್ಯಾನ್‌,ಗೆ ಶ್ರೀರಾಮಸೇನೆ ಬೆಂಬಲ ನೀಡುತ್ತದೆ ಎಂದು ಹೇಳಿದರು.
ಬಹಳ ಜನರಿಗೆ ಮೇಲಕೋಟೆಯಲ್ಲಿ ಮುಸ್ಲಿಮರಿಂದ ದೇವರ ಮೂರ್ತಿ ಕೆತ್ತನೆ ಬಗ್ಗೆ ತಿಳಿದಿರಲಿಲ್ಲ. ಆದರೆ, ಮಾಜಿ ಸಿಎಂ ಕುಮಾರಸ್ವಾಮಿ ಅವರೇ ಅದನ್ನು ಪ್ರಸ್ತಾಪಿಸಿದ್ದರು. ಬಹಿಷ್ಕಾರಕ್ಕೆ ಕುಮಾರಸ್ವಾಮಿ ಅವರೇ ಕಾರಣ ಎಂದು ಹೇಳಿದ್ದಾರೆ.
ಇನ್ನೂ ಇದೇ ವೇಳೆ ಅಲ್‌ ಖೈದಾ ಮುಖ್ಯಸ್ಥ ಅಲ್ ಜವಾಹಿರಿ ಮಂಡ್ಯದ ಮುಸ್ಕಾನ್ ಬೆಂಬಲಿಸಿದ ಪ್ರಕರಣವನ್ನು ಸರಕಾರ ನಿರ್ಲಕ್ಷಿಸಬಾರದು ಎಂದು ಹೇಳಿದ್ದಾರೆ.
ಇಡೀ ಹಿಂದು ಧರ್ಮವನ್ನು ಅವಹೇಳನ ಮಾಡಿದ್ದಾನೆ. ಈ ಪ್ರಕರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಗ್ರ ಸಂಘಟನೆ ಹೋಗಿ ಇಡೀ ಭಾರತಕ್ಕೆ ಎಚ್ಚರಿಕೆ ಕೊಟ್ಟಿದ್ದು ಭಯಂಕರ ಸ್ಥಿತಿಗೆ ತಲುಪಿದೆ. ಆದ್ದರಿಂದ ಸರಕಾರ ಕಣ್ಣು ಮುಚ್ಚಿ ಕುಳಿತುಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ನಾಯಕರು ಒಬ್ಬರ ಮೇಲೆ ಒಬ್ಬರು ಆರೋಪ ಮಾಡಬಾರದು. ಭಾರತ ಸುರಕ್ಷತೆಗೆ ಕ್ರಮ ತೆಗೆದುಕೊಳ್ಳಬೇಕು. ಆದರೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಇದನ್ನು ಗಂಭೀರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.
ಪ್ರತಿ ಹಂತದಲ್ಲೂ ಸಹ ಹಿಂದು ಸಂಘಟನೆಯನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಇದು ನಿಲ್ಲಬೇಕು ಎಂದು ಆಗ್ರಹಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!