ಕೇಂದ್ರ ಸರ್ಕಾರದ ವಿರುದ್ಧ ಗೊತ್ತುವಳಿ ಅಂಗೀಕರಿಸಿದ ಕೇರಳ ಸರ್ಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಗುರುವಾರ ಗೊತ್ತುವಳಿಯನ್ನು ‌ಅಂಗೀಕರಿಸಿದೆ.

ಸದನದಲ್ಲಿ ವಿರೋಧ ಪಕ್ಷದ ಗೈರುಹಾಜರಿಯ ನಡುವೆಯೂ, ಗೊತ್ತುವಳಿಯು ಸರ್ವಾನುಮತದಿಂದ ಅಂಗೀಕಾರಗೊಂಡಿದೆ ಎಂದು ಸ್ಪೀಕರ್ ಎ.ಎನ್‌ ಶಮ್ಶೀರ್‌ ಘೋಷಣೆ ಮಾಡಿದ್ದಾರೆ.

ಗೊತ್ತುವಳಿಯನ್ನು ಮಂಡಿಸಿದ ಹಣಕಾಸು ಸಚಿವ ಕೆ.ಎನ್‌ ಗೋಪಾಲ್‌ ಅವರು, ‘ ಹಣಕಾಸು ಆಯೋಗದ ಸಲಹೆಗಳನ್ನು ನಿರಾಕರಿಸಿರುವ ಕೇಂದ್ರವು ಕೇರಳದ ಖರೀದಿ ಮಿತಿಯನ್ನು ಕಡಿಮೆಗೊಳಿಸಿದೆ ಮತ್ತು ಕಂದಾಯ ಕೊರತೆ ಅನುದಾನಕ್ಕೆ ಕತ್ತರಿ ಹಾಕಿದೆ’ ಎಂದು ಆರೋಪಿಸಿದರು.

‘ಕೇಂದ್ರ ಸರ್ಕಾರದ ಚಟುವಟಿಕೆಗಳು ದೇಶದ ಸಹಕಾರಿ ತತ್ವಕ್ಕೆ ಗಾಸಿಗೊಳಿಸುತ್ತಿವೆ. ಕೆಲವೊಂದು ವಿಚಾರಗಳಲ್ಲಿ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಅಧಿಕಾರ ಇದೆ. ಹಾಗೆಯೇ ಸಂವಿಧಾನವು ರಾಜ್ಯಗಳಿಗೂ ಕೆಲವೊಂದು ವಿಚಾರಗಳಲ್ಲಿ ಸಂಪೂರ್ಣ ಅಧಿಕಾರವನ್ನು ನೀಡಿದೆ’ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!