ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳ ರಾಜ್ಯಪಾಲ ಹಾಗು ಎಲ್ ಡಿಎಫ್ ಸರಕಾರದ ನಡುವಿನ ಮುಸುಕಿನ ಗುದ್ದಾಟ ದಿನೇ ದಿನೇ ಹೆಚ್ಚುತ್ತಿದ್ದು, ಇದೀಗ ಕೇರಳ ಸರ್ಕಾರ ಗುರುವಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಕಲಾಮಂಡಲಂ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಸ್ಥಾನದಿಂದ ವಜಾಗೊಳಿಸಿದೆ.
ಕಳೆದ ಹಲವು ದಿನಗಳಿಂದ ಉಪಕುಲಪತಿಗಳ ನೇಮಕ ಸೇರಿದಂತೆ ವಿಶ್ವವಿದ್ಯಾಲಯಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಾಗು ರಾಜ್ಯಪಾಲರ ನಡುವೆ ಜಗಳ ಮಾತು ನಡೆಯುತ್ತಿದೆ.
ನಿನ್ನೆಯಷ್ಟೇ ಸರಕಾರ ರಾಜ್ಯಪಾಲರ ಬದಲಿಗೆ ಕಲೆ ಮತ್ತು ಸಂಸ್ಕೃತಿ ಕ್ಷೇತ್ರದ ಗಣ್ಯ ವ್ಯಕ್ತಿಯನ್ನು ನೇಮಿಸಲು ವಿಶ್ವವಿದ್ಯಾಲಯದ ನಿಯಮಗಳನ್ನು ಬದಲಾಯಿಸುತ್ತಿರುವುದಾಗಿ ಹೇಳಿತ್ತು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ