ಅನಾರೋಗ್ಯಕ್ಕೆ ಒಳಗಾದ ‘ದಿ ಕೇರಳ ಸ್ಟೋರಿ’ ನಿರ್ದೇಶಕ ಸುದೀಪ್ತೋ ಸೇನ್​ : ಶೀಘ್ರ ಚೇತರಿಕೆಗೆ ಅಭಿಮಾನಿಗಳ ಪ್ರಾರ್ಥನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಆದರೆ ಇತ್ತ ನಿರ್ದೇಶಕ ಸುದೀಪ್ತೋ ಸೇನ್​ (Sudipto Sen) ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ.

ಹಲವು ವರ್ಷಗಳಿಂದ ಸುದೀಪ್ತೋ ಸೇನ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹಲವು ಸಿನಿಮಾ ಮತ್ತು ಸಾಕ್ಷ್ಯಚಿತ್ರಗಳಿಗೆ ನಿರ್ದೇಶನ ಮಾಡಿದ್ದರೂ ಕೂಡ ಅವರಿಗೆ ದೊಡ್ಡ ಗೆಲುವು ಸಿಕ್ಕಿರಲಿಲ್ಲ. ಆದರೆ ‘ದಿ ಕೇರಳ ಸ್ಟೋರಿ’ ಸಿನಿಮಾ ಗೆದ್ದ ಬಳಿಕ ಅವರಿಗೆ ಅಪಾರ ಜನಪ್ರಿಯತೆ ಸಿಕ್ಕಿತು. ಈ ಸಿನಿಮಾದ ಪ್ರಚಾರದಲ್ಲಿ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ಅನೇಕ ಊರುಗಳಿಗೆ ಭೇಟಿ ನೀಡಿದ್ದರು. ವಿಶ್ರಾಂತಿ ಇಲ್ಲದೇ ಪ್ರಯಾಣ ಮಾಡಿದ್ದರಿಂದಲೇ ಸುದೀಪ್ತೋ ಸೇನ್​ ಅವರಿಗೆ ಈಗ ಆರೋಗ್ಯ ಕೈ ಕೊಟ್ಟಿದೆ.

ಕೆಲವೇ ದಿನಗಳ ಹಿಂದೆ ಸುದೀಪ್ತೋ ಸೇನ್​ ಪ್ರಯಾಣಿಸುತ್ತಿದ್ದ ವಾಹನ ಅಪಘಾತಕ್ಕೆ ಈಡಾಗಿತ್ತು. ಆದರೂ ಅವರಿಗೆ ಹೆಚ್ಚೇನೂ ಪೆಟ್ಟಾಗಿರಲಿಲ್ಲ ಎಂಬುದು ಸಮಾಧಾನಕರ ಸಂಗತಿ. ಅದರ ಬೆನ್ನಲ್ಲೇ ಅವರಿಗೆ ಅನಾರೋಗ್ಯ ಉಂಟಾಗಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಸುದೀಪ್ತೋ ಸೇನ್​ ಮತ್ತು ತಂಡದವರು ಬೇರೆ ಬೇರೆ ನಗರಗಳಿಗೆ ತೆರಳಿ ಪ್ರಚಾರ ಮುಂದುವರಿಸುವ ಪ್ಲ್ಯಾನ್​ನಲ್ಲಿದ್ದಾರೆ. ನಿರ್ದೇಶಕರು ಅನಾರೋಗ್ಯದಿಂದ ಚೇತರಿಸಿಕೊಳ್ಳಲಿ ಎಂದು ಕಾಯಲಾಗುತ್ತಿದೆ.ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಮತ್ತು ಆಪ್ತರು ಪ್ರಾರ್ಥಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!