ದಿ ಕೇರಳ ಸ್ಟೋರಿ ಸಿನಿಮಾ ಅಲ್ಲ, ಆಂದೋಲನ: ಅದಾ ಶರ್ಮಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

‘ದಿ ಕೇರಳ ಸ್ಟೋರಿ ದೇಶದಲ್ಲಿ ಅದ್ದೂರಿಯಾಗಿ ಪ್ರದರ್ಶನ ಕಾಣುತ್ತಿರುವ ಸಿನಿಮಾ. ಈಗಾಗಲೇ ಬಾಕ್ಸ್​ ಆಫೀಸ್​ನಲ್ಲಿ 150 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿರುವ ಸಿನಿಮಾದ ಬಗ್ಗೆ ಎಲ್ಲ ಕಡೆ ಚರ್ಚೆ ಆಗುತ್ತಿದೆ.

ಈ ಸಿನಿಮಾಗೆ ಸುದೀಪ್ತೋ ಸೇನ್​ (Sudipto Sen) ಅವರು ನಿರ್ದೇಶನ ಮಾಡಿದ್ದಾರೆ. ಮುಖ್ಯಭೂಮಿಕೆಯಲ್ಲಿ ಅದಾ ಶರ್ಮಾ (Adah Sharma)ನಟಿಸಿದ್ದಾರೆ.

ಇದೀಗ ‘ದಿ ಕೇರಳ ಸ್ಟೋರಿ’ ಸಿನಿಮಾಗೆ ಸಿಗುತ್ತಿರುವ ಭರ್ಜರಿ ರೆಸ್ಪಾನ್ಸ್​ ನೋಡಿ ಅದಾ ಶರ್ಮಾ ಖುಷಿ ಆಗಿದ್ದಾರೆ. ‘ಇದೊಂದು ಸಿನಿಮಾ ಅಲ್ಲ. ಇದು ಆಂದೋಲನ’ ಎಂದು ಅವರು ಹೇಳಿದ್ದಾರೆ.
‘ಈ ಮೊದಲು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಸಿಕ್ಕಾಗ ‘1920’ ಮತ್ತು ‘ಕಮಾಂಡೋ’ ಸಿನಿಮಾ ಬಗ್ಗೆ ಮಾತನಾಡುತ್ತಿದ್ದರು. ಆದರೆ ಈಗ ದಿ ಕೇರಳ ಸ್ಟೋರಿ ಬಗ್ಗೆ ಮಾತನಾಡುತ್ತಾರೆ. ಕಣ್ಣು ತೆರೆಸಿದ್ದಕ್ಕೆ ಧನ್ಯವಾದಗಳು ಎಂದು ತಾಯಂದಿರು ಕಣ್ಣೀರು ಹಾಕುತ್ತಾ ಹೇಳುತ್ತಾರೆ. ಹುಡುಗಿಯರಿಗೆ ಈ ಚಿತ್ರ ಇಷ್ಟ ಆಗಿದೆ. ನಾಲ್ಕು-ಐದು ಬಾರಿ ಸಿನಿಮಾ ನೋಡಿದ ಹುಡುಗರು ಬಂದು ಕೆಲವು ಡೈಲಾಗ್​ ಮತ್ತು ದೃಶ್ಯಗಳ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಈಗ ಕೇವಲ ಸಿನಿಮಾವಾಗಿ ಉಳಿದಿಲ್ಲ. ಇದೊಂದು ಆಂದೋಲನ ಆಗಿದೆ’ ಎಂದಿದ್ದಾರೆ.

2008ರಿಂದಲೂ ಅದಾ ಶರ್ಮಾ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡ, ಹಿಂದಿ, ತೆಲುಗು, ತಮಿಳು ಭಾಷೆಯ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. ಕನ್ನಡದಲ್ಲಿ ಅವರು ನಟಿಸಿದ ಏಕೈಕ ಸಿನಿಮಾ ‘ರಣವಿಕ್ರಮ’. 2015ರಲ್ಲಿ ತೆರೆಕಂಡಿದ್ದ ಆ ಚಿತ್ರಕ್ಕೆ ಪುನೀತ್​ ರಾಜ್​ಕುಮಾರ್​ ಹೀರೋ ಆಗಿದ್ದರು. ಪುನೀತ್​ಗೆ ಜೋಡಿಯಾಗಿ ಅದಾ ಶರ್ಮಾ ಅಭಿನಯಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!