ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಚೆಯುಟ್ಟ ರೈತನಿಗೆ ಒಳಗಡೆ ಪ್ರವೇಶ ನೀಡದಿರಲು ಕಾರಣವೇನು ಎಂದು ಬಿಬಿಎಂಪಿ ಅಧಿಕಾರಿಗಳು ಜಿಟಿ ಮಾಲ್ಗೆ ನೋಟಿಸ್ ನೀಡಿದ್ದಾರೆ.
ಬಿಬಿಎಂಪಿ ಅಧಿಕಾರಿಗಳ ನೋಟಿಸ್ಗೆ ಜಿಟಿ ಮಾಲ್ ಸಿಇಒ ಪ್ರಶಾಂತ್ ಆನಂದ್ ಉತ್ತರಿಸಿದ್ದು, ಘಟನೆಯಿಂದ ನಮಗೂ ತೀವ್ರ ಬೇಸರವಾಗಿದೆ. ಪಂಚೆ ನಮ್ಮ ಕರ್ನಾಟಕ ರಾಜ್ಯದ ಸಾಂಸ್ಕೃತಿಕ ಉಡುಗೆಯಾಗಿದೆ. ಜಿಟಿ ಮಾಲ್ನಲ್ಲೂ ಸಾಕಷ್ಟು ಮಳಿಗೆಗಳಲ್ಲಿ ಪಂಚೆ ಮಾರಲಾಗುತ್ತಿದೆ. ರೈತನನ್ನು ಒಳಗೆ ಬಿಡದ ಭದ್ರತಾ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಪಂಚೆ ಧರಿಸುವವರಿಗೆ ಮಾಲ್ ಪ್ರವೇಶವಿಲ್ಲವೆಂಬುದು ಶುದ್ಧ ಸುಳ್ಳು. ಈ ಹಿಂದೆಯೂ ಹಲವು ಗ್ರಾಹಕರು ಪಂಚೆ ಧರಿಸಿ ಮಾಲ್ಗೆ ಬಂದಿದ್ದಾರೆ. ಇಂತಹ ಘಟನೆ ಮರುಕಳಿಸುವುದಿಲ್ಲ ಎಂದು ಉತ್ತರಿಸಿದ್ದಾರೆ.