Friday, December 8, 2023

Latest Posts

ವಾಕಿಂಗ್ ಹೋಗಿದ್ದ ವ್ಯಕ್ತಿ ವಾಪಾಸ್ ಬರಲೇ ಇಲ್ಲ! ಟಿಪ್ಪರ್ ಹರಿದು ಭೀಕರ ಸಾವು

ಹೊಸದಿಗಂತ ವರದಿ ಕುಷ್ಟಗಿ:

ವಾಯುವಿಹಾರಕ್ಕೆ ತೆರಳಿದ್ದ ಇಬ್ಬರ ಮೇಲೆ ಟಿಪ್ಪರ್ ಹರಿದ ಪರಿಣಾಮ ಓರ್ವ ಸ್ಥಳದಲ್ಲೇ ‌ಮೃತಪಟ್ಟ ಘಟನೆ ಕೊಪ್ಪಳ ರಸ್ತೆಯ ಡಾ.ಅನೂಪ್ ಶೆಟ್ಟಿ ಪೊಲೀಸ್ ಕಾಲೋನಿ ಬಳಿ ಶುಕ್ರವಾರ ‌ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕುಷ್ಟಗಿ ಪಟ್ಟಣದ ದೊಡ್ಡಪ್ಪ ಕಂಚಿ ಎಂದು ಗುರುತಿಸಲಾಗಿದೆ. ಕುಷ್ಟಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಾಹಕ ಅಧಿಕಾರಿ ಶೇಖರಪ್ಪ ಅಬ್ಬಿಗೇರಿ ಅವರಿಗೆ ಕೈ ಮುರಿದಿದೆ.
ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆ ಗೆ ದಾಖಲಿಸಲಾಗಿದೆ. ಈ ಸಂಬಂಧ ಕುಷ್ಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!