ಹೊಸದಿಗಂತ ವರದಿ,ವಿಜಯಪುರ:
ಮನೆಯಲ್ಲಿದ್ದ ಮಹಿಳೆಯ ತಲೆಗೆ ರಾಡ್ ನಿಂದ ಹಲ್ಲೆ ಮಾಡಿ, ದುಷ್ಕರ್ಮಿಗಳು ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ನಗರದ ಅಕ್ಕಿ ಕಾಲೋನಿಯಲ್ಲಿ ಮಂಗಳವಾರ ನಡೆದಿದೆ.
ಇಲ್ಲಿನ ನಿರ್ಮಲಾ ಸಪ್ಪಂಡಿ ಎಂಬವರು ಮನೆಯಲ್ಲಿ ಒಬ್ಬರೇ ಇರುವುದನ್ನು ಗಮನಿಸಿದ ದುಷ್ಕರ್ಮಿಗಳು, ತಲೆಯ ಮೇಲೆ ಕಬ್ಬಿಣದ ರಾಡ್ ನಿಂದ ಹೊಡೆದು, ಮನೆಯಲ್ಲಿದ್ದ 40 ಗ್ರಾಂ ಚಿನ್ನಾಭರಣ, 25 ಸಾವಿರ ನಗದು ಸೇರಿದಂತೆ ಇತರೇ ವಸ್ತುಗಳ ಕಳ್ಳತನ ಮಾಡಿದ್ದಾರೆ.
ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.