ಮಾರಕಾಸ್ತ್ರಗಳಿಂದ ಕಡಿದು ಯುವಕನ ಬರ್ಬರ ಹತ್ಯೆ

ಹೊಸದಿಗಂತ, ಮಂಡ್ಯ: 

ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಯುವಕನನ್ನು ಕೊಚ್ಚಿ ಕೊಲೆಗೈದಿರುವ ಘಟನೆ ಶ್ರೀರಂಗಪಟ್ಟಣ ತಾಲೂಕು ಪಾಲಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಗ್ರಾಮದ ವಕೀಲ ನಾಗೇಂದ್ರ ಎಂಬುವರ ಪುತ್ರ ಸುಪ್ರೀತ್ ಅಲಿಯಾಸ್ ಪಾಪು (29) ಕೊಲೆಯಾದ ಯುವಕ.

ಗ್ರಾಮದ ಹಾಲಿನ ಡೇರಿ ವೃತ್ತದ ಸಮೀಪ ನಿಂತಿದ್ದ ಯುವಕನ ಮೇಲೆ ಕಾರಿನಲ್ಲಿ ಬಂದ ಮೂರ್ನಾಲ್ಕು ಮಂದಿ ದುಷ್ಕರ್ಮಿಗಳು ಏಕಾಏಕಿ ಸುಪ್ರೀತ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಆತ ಯಾವುದೇ ಕಾರಣಕ್ಕೂ ಬದುಕುಳಿಯಬಾರದು ಎಂಬ ಕಾರಣಕ್ಕೆ ತಲೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಕೆ.ಆರ್.ಎಸ್. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!