ಮನೆ ಮನೆಗಳ ಮೇಲೆ ಹಾರಾಡಿದ ರಾಷ್ಟ್ರಧ್ವಜ

ಹೊಸದಿಗಂತ ವರದಿ ಬಾಗಲಕೋಟೆ :
ಸ್ವಾತಂತ್ರ್ಯ ಅಮೃತಮಹೋತ್ಸವ ಹಿನ್ನಲೆಯಲ್ಲಿ ಆ.13 ರಿಂದ 15 ರವರೆಗೆ ಮನೆ‌ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ೭೫ನೇ ವರ್ಷದ ಸ್ವಾತಂತ್ರ್ಯವನ್ನು ಸಂಭ್ರಮದಿಂದ ಆಚರಿಸಬೇಕು ಎಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದಕ್ಕೆ ದೇಶದ ಜನ ರಾಷ್ಟ್ರಪ್ರೇಮ ಮೆರೆದರು.
ಬೆಳಗಾಗುತ್ತಿದ್ದಂತೆ ಬಾಗಲಕೋಟೆ ಜಿಲ್ಲೆಯಾದ್ಯಂತ ಮನೆ ಹಾಗೂ ಅಂಗಡಿ, ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ಚಜ ಹಾರಿಸಲಾಯಿತು. ಶಾಸಕ ವೀರಣ್ಣ ಚರಂತಿಮಠ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಅವರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಿದರು. ಅಂಗಡಿಕಾರರು, ಮನೆಯಲ್ಲಿ ರಾಷ್ಟ್ರಧ್ವಜ ಹಾರಿಸುವ ಮುನ್ನ ಮನೆಯ ಮುಂದೆ ಸ್ವಚ್ಚಗೊಳಿಸಿ, ವಿವಿಧ ನಮೂನೆಯ ರಂಗೋಲಿ ಬಿಡಿಸಿ ನಂತರ ಮನೆಯವರೆಲ್ಲ ಸೇರಿ ರಾಷ್ಟ್ರಧ್ವಜ ಹಾರಿಸಿ ದೇಶಭಕ್ತಿ ಮೆರೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!