ಮೇ 22ರಿಂದ ಮೊದಲ ವಿಧಾನಸಭೆ ಅಧಿವೇಶನ ಕರೆದ ನೂತನ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ರಚನೆಯಾದ ನಂತರ ಸೋಮವಾರದಿಂದ (ಮೇ 22) ಮೊದಲ ವಿಧಾನಸಭೆ ಅಧಿವೇಶನ (Karnataka Assembly Session) ನಡೆಯಲಿದೆ.

ಒಟ್ಟು ಮೂರು ದಿನಗಳ ಕಾಲ ಅಧಿವೇಶನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹೇಳಿದರು. ಹಂಗಾವಿ ಸ್ಪೀಕರ್ ನೇತೃತ್ವದಲ್ಲಿ ಅಧಿವೇಶನ ನಡೆಯಲಿದೆ ಎಂದರು.

ಮೇ 22ರಂದು ನಡೆಯುವ ಅಧಿವೇಶನದ ಹಂಗಾಮಿ ಸಭಾಪತಿಯಾಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ ಇರಲಿದ್ದಾರೆ. ಎಲ್ಲಾ ಶಾಸಕರ ಪ್ರಮಾಣವಚನ ಸ್ವೀಕಾರದ ನಂತರ ಸಭಾಪತಿ ಆಯ್ಕೆ ನಡೆಯಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!