ಹೊಸದಿಗಂತ ಡಿಜಿಟಲ್ ಡೆಸ್ಕ್:
ತ್ರಿಪುರಾದ ಮೃಗಾಲಯದಲ್ಲಿ ಸಿಂಹ ಮತ್ತು ಸಿಂಹಿಣಿಗೆ ಅಕ್ಬರ್-ಸೀತಾ ಎಂದು ಹೆಸರಿಟ್ಟಿದ್ದ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಈ ರೀತಿ ಹೆಸರನ್ನು ಇಟ್ಟಿರುವುದು ಜನರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್ ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿತ್ತು.
ಕೋರ್ಟ್ ಆದೇಶದ ಮೇಲೆ ಸರ್ಕಾರ ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಬಿನ್ ಲಾಲ್ ಅಗರ್ವಾಲ್ರನ್ನು ಅಮಾನತುಗೊಳಿಸಿದೆ.
ಇದರ ಜೊತೆಗೆ ಸಿಂಹ ಹಾಗೂ ಸಿಂಹಿಣಿಯ ಹೆಸರನ್ನು ಬದಲಾಯಿಸುವಂತೆ ಕೋರ್ಟ್ ಸೂಚನೆ ನೀಡಿದೆ.