ಈ ದೇಶವನ್ನು ಉಳಿಸುವ ಒಬ್ಬರೇ ಒಬ್ಬ ವ್ಯಕ್ತಿ ಅದು ನರೇಂದ್ರ ಮೋದಿ: ಹೆಚ್‌.ಡಿ ದೇವೇಗೌಡ ಗುಣಗಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಭ್ರಷ್ಟ ಸರ್ಕಾರ ಕರ್ನಾಟಕದ ಸಂಪತ್ತನ್ನು ಬೇರೆ ರಾಜ್ಯಗಳ ಚುನಾವಣೆಗೆ (Elections) ಹಂಚುತ್ತಿದ್ದಾರೆ. ಇಂತಹ ಕೆಟ್ಟ ಸರ್ಕಾರವನ್ನು ಕಿತ್ತೊಗೆಯಬೇಕು ಅನ್ನೋ ಕಾರಣಕ್ಕೆ ನಾವು ಒಂದಾಗಿದ್ದೇವೆ. ಈ ದೇಶ ಉಳಿಸುವ ಒಬ್ಬರೇ ಒಬ್ಬ ವ್ಯಕ್ತಿ ಅದು ನರೇಂದ್ರ ಮೋದಿ ಎಂದು ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ (HD Devegowda) ಅವರು ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವರಹಳ್ಳಿಯಲ್ಲಿ ಬಿಜೆಪಿ-ಜೆಡಿಎಸ್ ಜಂಟಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,. ಯಡಿಯೂರಪ್ಪ ಅವರು ವಯಸ್ಸಿನ ಕಾರಣದಿಂದ ಮುಖ್ಯಮಂತ್ರಿ ಸ್ಥಾನದಿಂದ ಇಳಿದರು. ಯಡಿಯೂರಪ್ಪ (BS Yediyurappa) ಅವರು ರಾಜ್ಯದ ಉದ್ದಲಕ್ಕೂ ಹೋರಾಟ ಮಾಡಿದ್ದಾರೆ. ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಹೋರಾಟದ ಕಿಚ್ಚು ಅವರ ಹೃದಯದಲ್ಲಿ ಬೇರೂರಿದೆ. 28ಕ್ಕೆ 28 ಸ್ಥಾನ ಗೆಲ್ಲಿಸಿಕೊಡ್ತೀವಿ ಅಂತ ಪ್ರಧಾನಿಯವರಿಗೆ ಹೇಳಿದ್ದೇನೆ. ಎತ್ತಿನಹೊಳೆ ಯೋಜನೆ ನೀರು ಕೋಲಾರ, ಚಿಕ್ಕಬಳ್ಳಾಪುರಕ್ಕೆ ಬರೋದಿಲ್ಲ. 8 ಸಾವಿರದಿಂದ ಯೋಜನೆ ಆರಂಭ ಆಯ್ತು. ಏನೇನು ಅವ್ಯವಹಾರ ಮಾಡಿದ್ದಾರೆ ಮಹಾನಾಯಕರು ಎಂದು ದೂರಿದ್ದಾರೆ.

9 ಜಿಲ್ಲೆಗಳ 24 ತಾಲ್ಲೂಕಿನಲ್ಲಿ ಕುಡಿಯುವ ನೀರಿಲ್ಲ. ಬೆಂಗಳೂರಿನಲ್ಲಿ ಟ್ಯಾಂಕರ್‌ಗಳಲ್ಲಿ ನೀರು ಮಾರುವ ದಂಧೆ ಮಾಡುತ್ತಿದ್ದಾರೆ. ದೊಡ್ಡದಾಗಿ ಮಾತನಾಡುವವರು ಇದನ್ನು ತಡೆಯಲು ಆಗಲಿಲ್ಲ. ನನ್ನ 62 ವರ್ಷದ ರಾಜಕೀಯ ಅನುಭವದಲ್ಲಿ ಇಂತಹ ಭ್ರಷ್ಟ ಸರ್ಕಾರ ನೋಡಲಿಲ್ಲ. ನಮ್ಮ ರಾಜ್ಯದ ಸಂಪತ್ತನ್ನು ಬೇರೆ ರಾಜ್ಯಗಳ ಚುನಾವಣೆಗಳಿಗೆ ಹಂಚುತ್ತಿದ್ದಾರೆ. ಇಂತಹ ಸರ್ಕಾರ ಇರಬಾರದು, ಚುನಾವಣೆ ಮುಗಿದ ಮೇಲೆ ಈ ಸರ್ಕಾರ ತೆಗಿಯಬೇಕು ಎಂಬ ಉದ್ದೇಶದಿಂದ ಒಂದಾಗಿದ್ದೇವೆ ಎಂದಿದ್ದಾರೆ.

ಮೋದಿಯವರು ವಿಶ್ವ ನಾಯಕರಾಗಿ ಬೆಳೆದಿದ್ದಾರೆ, ಮುಂದೆ ಅವರೇ ಪ್ರಧಾನಿಯಾಗ್ತಾರೆ. ಆದ್ರೆ ಇಂಡಿಯಾ ಒಕ್ಕೂಟದಲ್ಲಿ ಯಾರು ಪ್ರಧಾನಿಯಾಗ್ತಾರೆ ಅಂತ ಸಿದ್ದರಾಮಯ್ಯ ಹೇಳಲಿ, ನಾನು ತಲೆ ಬಾಗುತ್ತೇನೆ. ಕಾಂಗ್ರೆಸ್‌ಗೆ ವೋಟು ಕೊಡಬಾರದು ಅಂತ ಮಮತಾ ಬ್ಯಾನರ್ಜಿ ಹೇಳ್ತಾರೆ. 28 ಸ್ಥಾನ ಗೆಲ್ಲಬೇಕೆಂಬ ಹುಚ್ಚು ನಮಗೆ, ಆ ಕಾರಣಕ್ಕೆ ನಾನು-ಯಡಿಯೂರಪ್ಪ ಒಂದಾಗಿದ್ದೇವೆ. ಈ ದೇಶವನ್ನು ಉಳಿಸುವ ಒಬ್ಬರೇ ಒಬ್ಬ ವ್ಯಕ್ತಿ ಅದು ನರೇಂದ್ರ ಮೋದಿ ಎಂದು ಗುಣಗಾನ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!