ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪಂಚರತ್ನ ಯಾತ್ರೆ ರದ್ದಾಗಿದೆ.
ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾದ ಕಾರಣ ಬೆಂಗಳೂರಿನ ಯಶವಂತಪುರ ಕ್ಷೇತ್ರದಲ್ಲಿ ನಡೆಯಬೇಕಿದ್ದ ಪಂಚರತ್ ಯಾತ್ರೆ ರದ್ದಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಸರ್ಕಾರಿ ಕಾರ್ ಬಿಟ್ಟು ಖಾಸಗಿ ಕಾರ್ನಲ್ಲಿ ತೆರಳಿದ್ದಾರೆ. ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆಯೇ ಸರ್ಕಾರಿ ಕಾರ್ನ್ನು ಅಧಿಕಾರಿಗಳು ಹಿಂಪಡೆದಿದ್ದಾರೆ.