ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಅವರ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳು ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.
ವಿಚಾರಣೆ ವೇಳೆ ದರ್ಶನ್ ಮತ್ತು ಗ್ಯಾಂಗ್ ರೇಣುಕಸ್ವಾಮಿ ಹತ್ಯೆ ನಡೆಯುವ ರಾತ್ರಿ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ನಲ್ಲಿ ಪಾರ್ಟಿ ಮಾಡಿದ್ದರು ಎಂದು ಬಾಯಿ ಬಿಟ್ಟಿದ್ದಾರೆ.
ಹೀಗಾಗಿ ಪೊಲೀಸರು ನಟ ದರ್ಶನ್ ಸಹಿತ ನಾಲ್ವರನ್ನು ರೆಸ್ಟೋರೆಂಟ್ ಗೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಜೊತೆಗೆ ನಟ ಚಿಕ್ಕಣ್ಣನನ್ನು ಕೂಡ ಪೊಲೀಸರು ಕರೆಸಿದ್ದಾರೆ.
ರಾಜರಾಜೇಶ್ವರಿ ನಗರದಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ನಲ್ಲಿ ನಡೆದ ಪಾರ್ಟಿ ನಲ್ಲಿ ನಟ ಚಿಕ್ಕಣ್ಣ ಕೂಡ ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.