ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಶ್ರೀ ಕೃಷ್ಣ ಮಠದ ಸಂಭ್ರಮದ ಪರ್ಯಾಯಕ್ಕೆ ದಿನ ಹತ್ತಿರವಾಗುತ್ತಿದ್ದು, ಈ ಬಾರಿ ಪೀಠವನ್ನು ಅಲಂಕರಿಸಲು ಪುತ್ತಿಗೆ ಮಠದ ಶ್ರೀ ಸುಗಣೇಂದ್ರ ತೀರ್ಥರು ಸಜ್ಜಾಗುತ್ತಿದ್ದಾರೆ.
ಈ ನಡುವೆ ಪುತ್ತಿಗೆ ಶ್ರೀಗಳ ಪರ್ಯಾಯ ಮಹೋತ್ಸವಕ್ಕೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾಗೊಳಿಸಿದೆ.
ಪುತ್ತಿಗೆ ಶ್ರೀಗಳು ಸಮುದ್ರೋಲ್ಲಂಘನೆ ಮಾಡಿ ವಿದೇಶಕ್ಕೆ ಪ್ರಯಾಣಿಸಿ ಸಂಪ್ರದಾಯ ಉಲ್ಲಂಘಿಸಿದ ಕಾರಣ ಅವರಿಗೆ ಪರ್ಯಾಯ ನೀಡದಂತೆ ಕೋರಿ ಗುರುರಾಜ ಜೀವನರಾವ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ಕುರಿತು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ರಿದ್ದ ಪೀಠ, ವಿದೇಶದಲ್ಲಿ ಜ್ಞಾನ ಪ್ರಸಾರ ಮಾಡಿದರೆ ತಪ್ಪೇನು ಎಂದು ಪ್ರಶ್ನಿಸಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.