ಶಾಕಿಂಗ್ ವೀಡಿಯೋ | ಮಧ್ಯರಾತ್ರಿ ಏಕಾಏಕಿ ರೈತರ ಮನೆಗೆ ನುಗ್ಗಿ ಲಾಠಿ ಬೀಸಿದ ಪೊಲೀಸರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರದ ಬಕ್ಸರ್‌ನಲ್ಲಿ ರೈತರ ಮನೆಗೆ ಪೊಲೀಸರು ಮಧ್ಯರಾತ್ರಿ ನುಗ್ಗಿದ್ದು, ಲಾಠಿಪ್ರಹಾರ ನಡೆಸಿದ್ದಾರೆ.
ನಿದ್ದೆಯಲ್ಲಿದ್ದ ರೈತರಿಗೆ ಏಕಾಏಕಿ ಹೊಡೆಯಲು ಆರಂಭಿಸಿದ್ದು, ಸಹಾಯಕ್ಕಾಗಿ ಕುಟುಂಬದವರು ಕೂಗಾಡಿದ್ದು ವಿಡಿಯೋದಲ್ಲಿ ಸೆರೆಯಾಗಿದೆ.

ಎಸ್‌ಜವಿಎನ್‌ನಿಂದ ವಿದ್ಯುತ್ ಸ್ಥಾವರಕ್ಕಾಗಿ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದಕ್ಕೆ ಸೂಕ್ತ ಪರಿಹಾರ ನೀಡುವಂತೆ ರೈತರು ಕೆಲ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆ ಸಮಯದಲ್ಲಿ ರೈತರಿಗೆ ಪರಿಹಾರ ನೀಡಲಾಗಿದೆ. ಆದರೆ ಕಳೆದ ವರ್ಷ ಮತ್ತೆ ಕಂಪನಿ ಹೆಚ್ಚಿನ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ಈ ಭೂಮಿಗೆ ಪ್ರಸ್ತುತ ಇರುವ ದರದಂತೆ ಪರಿಹಾರ ನೀಡಬೇಕು ಎನ್ನುವುದು ರೈತರ ಒತ್ತಾಯವಾಗಿದೆ.

ಕಂಪನಿ ಹಳೆಯ ದರದಲ್ಲಿ ಬಲವಂತವಾಗಿ ಭೂಮಿಯನ್ನು ಸ್ವಾಧೀನಪಡಿಸುತ್ತಿದೆ ಎಂದು ಆರೋಪಿಸಿ ತೀವ್ರ ಪ್ರತಿಭಟನೆ ನಡೆಯುತ್ತಿದ್ದ ಬೆನ್ನಲ್ಲೇ ಪೊಲೀಸರು ರೈತರ ಮನೆಗೆ ನುಗ್ಗಿ ದಾಳಿ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!