ಶ್ರೀಗಂಧ ಕಳವಿಗೆ ಯತ್ನಿಸುತ್ತಿದ್ದ ಕಳ್ಳನನ್ನು ಮಾಲು ಸಮೇತ ಹಿಡಿದ ಪೊಲೀಸರು

ಹೊಸದಿಗಂತ ವರದಿ, ಮಡಿಕೇರಿ:
ಶ್ರೀಗಂಧ ಮರದ ತುಂಡುಗಳನ್ನು ಕಳವು ಮಾಡಲು ಯತ್ನಿಸಿದ ಆರೋಪಿಯನ್ನು ಮಾಲು ಸಹಿತ ಬಂಧಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಕುಶಾಲನಗರ ಸಮೀಪದ ರಂಗಸಮುದ್ರದ ನಿವಾಸಿ ಪ್ರಸಾದ್ ಪಿ.ಆರ್. ಬಂಧಿತ ಆರೋಪಿ.
ಮಡಿಕೇರಿ ಬಳಿಯ ಮಕ್ಕಂದೂರು ಗ್ರಾಮದ ಖಾಸಗಿ ಜಾಗದಲ್ಲಿ ಶನಿವಾರ ರಾತ್ರಿ ಅಕ್ರಮವಾಗಿ ಶ್ರೀಗಂಧದ ಮರವನ್ನು ಬುಡದಿಂದ ಕಡಿದು ಕಳವು ಮಾಡಲು ಯತ್ನಿಸುತ್ತಿರುವುದಾಗಿ‌ ದೊರೆತ ಖಚಿತ ಮಾಹಿತಿ ಮೇರೆಗೆ ಮಡಿಕೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ ಹಾಗೂ ಮಡಿಕೇರಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೊಹಿಸಿನ್ ಬಾಷ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ವಲಯ ಅರಣ್ಯಾಧಿಕಾರಿ ಮಧುಸೂದನ್ ಎಂ.ಕೆ. ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ಉಪವಲಯ ಅರಣ್ಯಾಧಿಕಾರಿ ಬಾಬು ರಾಥೋಡ್, ಸಚಿನ್ ಹಾಗೂ ಅರಣ್ಯ ರಕ್ಷಕರಾದ ಸಂದೇಶ್ ಯು.ಆರ್., ಯತೀಶ್ ಸಿ.ಸಿ, ವಾಸುದೇವ ಯು.ಸಿ. ಹಾಗೂ ಸಿಬ್ಬಂದಿಗಳಾದ ಅಜಿತ್, ಮೋಹನ್, ಮಹೇಶ್, ಅನಿಲ್, ನವೀನ್ ಅವರುಗಳು ಆರೋಪಿಯನ್ನು ಬಂಧಿಸಿ ಶ್ರೀಗಂಧದ ಮರದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!