ಗುರೂಜಿ ಹತ್ಯೆ ಆರೋಪಿಗಳನ್ನು ದರದರನೆ ಎಳೆತಂದು ಬಂಧಿಸಿದ ಪೊಲೀಸರು!

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಭೀಕರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆಯಾದ 5 ಗಂಟೆಗಳಲ್ಲೇ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಆರೋಪಿಗಳಾದ ಮಹಾಂತೇಶ್ ಶಿರೂರ ಮತ್ತು ಮಂಜುನಾಥ ದುಮ್ಮವಾಡನನ್ನು ಬಂಧಿಸಿದ್ದಾರೆ.
ರಸ್ತೆ ಮಧ್ಯೆ ಜೆಸಿಬಿಯಿಂದ ಆರೋಪಿಗಳಿದ್ದ ಕಾರನ್ನು ಅಡ್ಡಗಟ್ಟಿದ ಪೊಲೀಸರು ಆರೋಪಿಗಳು ಪ್ರತಿದಾಳಿ ನಡೆಸಬಹುದು ಎಂಬ ಮುನ್ನೆಚ್ಚರಿಕೆಯಿಂದ ಗನ್ ಪಾಯಿಂಟ್ ನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರು ಚಂದ್ರಶೇಖರ ಗುರೂಜಿ ಅವರಿಗೆ ಆಪ್ತರಾಗಿದ್ದು ಸರಳವಾಸ್ತು ಸಂಸ್ಥೆಯಲ್ಲಿ ಗುರೂಜಿ ಜೊತೆ ಕೆಲಸ ಮಾಡಿದ್ದರು ಎಂಬ ವಿಷಯಗಳನ್ನು ಪೊಲೀಸರು ಕಲೆ ಹಾಕಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!