ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾ ರೈಲು ದುರಂತಕ್ಕೆ ಸಿಗ್ನಲ್ಸ್ ಮುಖ್ಯ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಅಧಿಕಾರಿಗಳು ತೆರಳಿ ಪರಿಶೀಲನೆ ಮಾಡಿದ್ದು. ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ.
ವರದಿಯಲ್ಲೇನಿದೆ?
ಕೋರಮಂಡಲ್ ಎಕ್ಸ್ಪ್ರೆಸ್ ಗೊತ್ತುಪಡಿಸಿದ ಮಾರ್ಗದಲ್ಲಿಯೇ ಚಲಿಸುವಂತೆ ಗ್ರೀನ್ ಸಿಗ್ನಲ್ ತೋರಿಸಲಾಗಿತ್ತು. ತದನಂತರ ಹಸಿರು ನಿಶಾನೆ ಹಿಂಪಡೆಯಲಾಗಿದೆ. ಆ ವೇಳೆಗಾಗಲೇ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿ ತಪ್ಪಿದೆ. ಅಷ್ಟರಲ್ಲಿ ಡೌನ್ಲೈನ್ನಲ್ಲಿ ಯಶವಂತಪುರ-ಹೌರಾ ಎಕ್ಸ್ಪ್ರೆಸ್ ರೈಲಿನ ಎರಡು ಬೋಗಿಗಳು ಹಳಿತಪ್ಪಿವೆ.