ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್-ಇಸ್ರೇಲ್ ಯುದ್ಧದಿಂದಾಗಿ ಸಾಕಷ್ಟು ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಇದೇ ಸಾಲಿಗೆ ನಂದಿನಿ ಹಾಲು ಹಾಗೂ ಇತರ ಉತ್ಪನ್ನಗಳು ಸೇರುವ ಸಮಯ ಹತ್ತಿರ ಬಂದಿದೆ.
ಅಡುಗೆ ಅನಿಲ ಬಳಕೆಯ ಮೇಲೆ ಕೇಂದ್ರ ಸರ್ಕಾರ ಕಡಿವಾಣ ಹಾಕಿದ್ದು, ಸಹಜವಾಗಿ ಹಾಲು ಹಾಗೂ ನಂದಿನಿ ಉತ್ಪನ್ನಗಳ ಬೆಲೆ ಏರಿಕೆ ಮಾಡಬೇಕಾಗಬಹುದು ಎಂದು ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಸದ್ಯಕ್ಕೆ ತೈಲ ಸರಬರಾಜಿನಲ್ಲಿ ಸಮಸ್ಯೆಯಿಲ್ಲ. ಆದರೆ ಅಡುಗೆ ಅನಿಲವನ್ನು ಶೇ.55ರಷ್ಟು ಮಾತ್ರ ಬಳಕೆ ಮಾಡಬೇಕು ಎಂಬ ನಿರ್ದೇಶನವಿದೆ. ಶೇಕಡಾ ನೂರರಷ್ಟು ಅಡುಗೆ ಅನಿಲ ಬಳಕೆ ಮಾಡಬೇಕಾದರೆ ಶೇ.35ರಷ್ಟು ಹೆಚ್ಚುವರಿ ಶುಲ್ಕ ಪಾವತಿಸುವಂತೆ ಸೂಚನೆ ನೀಡಲಾಗಿದೆ. ಈ ರೀತಿ ಹೆಚ್ಚುವರಿ ಆರ್ಥಿಕ ಹೊರೆಯಾದಾಗ ಅದರ ಹೊರೆ ಗ್ರಾಹಕರ ಮೇಲೆ ಬೀಳುತ್ತದೆ ಎಂದರು.



