ಕಾಂಗ್ರೆಸ್ ರೀತಿ ಕುಕ್ಕರ್, ಸೀರೆ ಹಂಚುವ ಕಾರ್ಯಕ್ರಮ ನಮ್ಮದಲ್ಲ: ಕೈ ನಾಯಕರ ವಿರುದ್ಧ ನಿಖಿಲ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಡದಿ ಬಳಿಯ ತಮ್ಮ ಫಾರ್ಮ್‌ಹೌಸ್ ಮೇಲೆ ನಡೆದ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ ಚುನಾವಣಾ ಕಾರ್ಯಕರ್ತರ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಯುಗಾದಿ ಹಬ್ಬಕ್ಕೆ ಸಾಮಾನ್ಯವಾಗಿ ನಾವು ಊಟದ ವ್ಯವಸ್ಥೆ ಮಾಡ್ತೀವಿ. ತೋಟದಲ್ಲಿ ಕೆಲಸ ಮಾಡುತ್ತಿದ್ದ 150 ಕಾರ್ಮಿಕರಿಗೆ ಊಟದ ವ್ಯವಸ್ಥೆ ಮಾಡಿದ್ದೆವು. ಬಿಜೆಪಿ-ಜೆಡಿಎಸ್ ನಾಯಕರ ಜತೆ ಔತಣಕೂಟದಲ್ಲಿ ಪಾಲ್ಗೊಳ್ಳಲು ಕೂಡ ನಿರ್ಧರಿಸಿದ್ದೇವು. ಅಲ್ಲಿ ಪಕ್ಷದ ಕಾರ್ಯಕ್ರಮವಿರಲಿಲ್ಲ, ಕಾಂಗ್ರೆಸ್ಸಿಗರಂತೆ ಕುಕ್ಕರ್, ಸೀರೆ ಹಂಚುವ ಕಾರ್ಯಕ್ರಮವಲ್ಲ ನಮ್ಮದು ಎಂದರು.

ಸೋಲಿನ ಭಯದಿಂದ ಕಾಂಗ್ರೆಸ್ ಈ ಆರೋಪ ಮಾಡಿದೆ. ಕಾಂಗ್ರೆಸ್ ಕುಕ್ಕರ್ ಮತ್ತು ಸೀರೆ ಹಂಚುತ್ತಿದ್ದರೂ ಚುನಾವಣಾ ಆಯೋಗ ಏಕೆ ಕ್ರಮ ಕೈಗೊಳ್ಳುತ್ತಿಲ್ಲ? ಒಟ್ಟಿನಲ್ಲಿ ಚುನಾವಣಾ ಅಧಿಕಾರಿಗಳು ಕಾಂಗ್ರೆಸ್ ನ ಕೈಗೊಂಬೆಗಳಿದ್ದಂತೆ ಎಂದು ಕಿಡಿಕಾರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!