August 20, 2026
Thursday, August 20, 2026
spot_img

ಸಿಎಂ ಕುರ್ಚಿ ರೇಸ್‌ಗೆ ಇಂದು ಕ್ಲೈಮ್ಯಾಕ್ಸ್: ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಫೈನಲ್ ಫೈಸಲಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ಶಾಸಕಾಂಗ ಸಭೆ ಮಹತ್ವ ಪಡೆದುಕೊಂಡಿದೆ. ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಹಿಂದೆ ಸರಿದ ಬೆನ್ನಲ್ಲೇ ಮುಂದಿನ ನಾಯಕನ ಆಯ್ಕೆ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆಯಲಿರುವ ಸಭೆಯತ್ತ ರಾಜಕೀಯ ವಲಯದ ಚಿತ್ತ ನೆಟ್ಟಿದೆ.

ಇಂದು ಸಿಎಲ್ಪಿ ಸಭೆ ನಿರ್ಣಾಯಕ

ವಿಧಾನಸೌಧದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೊಸ ಮುಖ್ಯಮಂತ್ರಿಯ ಆಯ್ಕೆ ಕುರಿತ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆ ಇದೆ. ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಬೆಳವಣಿಗೆಗಳಿಗೆ ಇದೇ ಸಭೆ ತೆರೆ ಎಳೆಯಲಿದೆ ಎನ್ನಲಾಗುತ್ತಿದೆ.

ಡಿಕೆಶಿ ಹೆಸರು ಮುಂಚೂಣಿಯಲ್ಲಿ

ಮುಖ್ಯಮಂತ್ರಿ ಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ನಾಯಕತ್ವ ಬದಲಾವಣೆಯ ಚರ್ಚೆ ಆರಂಭವಾದಾಗಿನಿಂದಲೇ ಅವರ ಹೆಸರು ಮುಂಚೂಣಿಯಲ್ಲಿದ್ದು, ಪಕ್ಷದೊಳಗೂ ಈ ಬಗ್ಗೆ ಚರ್ಚೆಗಳು ಜೋರಾಗಿವೆ.

ಇದನ್ನೂ ಓದಿ:

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸ ಸಮೀಕರಣ

ಮುಖ್ಯಮಂತ್ರಿ ಆಯ್ಕೆಯ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಗಮನ ಸೆಳೆದಿದೆ. ಈ ಹುದ್ದೆಗೆ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಹೆಸರು ಪ್ರಮುಖವಾಗಿ ಕೇಳಿಬರುತ್ತಿದ್ದು, ಪಕ್ಷದೊಳಗಿನ ಕೆಲವು ವಲಯಗಳು ಅವರ ಪರ ಒಲವು ತೋರಿವೆ ಎನ್ನಲಾಗಿದೆ.

ಪ್ರಮಾಣವಚನದ ದಿನಾಂಕಕ್ಕೂ ಇಂದು ಸ್ಪಷ್ಟತೆ?

ಹೊಸ ಮುಖ್ಯಮಂತ್ರಿ ಆಯ್ಕೆಯಾದ ಬಳಿಕ ಪ್ರಮಾಣವಚನ ಸಮಾರಂಭದ ದಿನಾಂಕ ಹಾಗೂ ರಾಜಕೀಯ ನೇಮಕಾತಿಗಳ ಕುರಿತ ರೂಪುರೇಷೆಯೂ ಸಭೆಯ ಬಳಿಕ ಸ್ಪಷ್ಟವಾಗುವ ಸಾಧ್ಯತೆ ಇದೆ. ಹೀಗಾಗಿ ಇಂದಿನ ಸಭೆ ಕಾಂಗ್ರೆಸ್ ಭವಿಷ್ಯದ ದಿಕ್ಕು ನಿರ್ಧರಿಸುವ ಮಹತ್ವದ ಘಟ್ಟವಾಗಿ ಪರಿಣಮಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !