March 14, 2026
Saturday, March 14, 2026
spot_img

ಮಳೆ ಮುಗಿತು ಅನ್ನೋವಷ್ಟರಲ್ಲಿ ಚಂಡಮಾರುತ ಶುರು! 24 ಗಂಟೆಗಳಲ್ಲಿ ಈ ಭಾಗದಲ್ಲಿ ವರುಣನ ಅಬ್ಬರ ಜೋರಾಗಿದ್ಯಂತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಸೇರಿದಂತೆ ದಕ್ಷಿಣ ಮತ್ತು ಪಶ್ಚಿಮ ಭಾರತದಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಜೋರಾಗುತ್ತಿದೆ. ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಸಹ ಧಾರಾಕಾರ ಮಳೆಯಾಗಿದ್ದು, ಇಂದಿನಿಂದ ಮತ್ತೆ ಮಳೆಯ ಸಾಧ್ಯತೆ ಹೆಚ್ಚಾಗಿದೆ.

ಆಗ್ನೇಯ ಅರೇಬಿಯನ್ ಸಮುದ್ರ ಹಾಗೂ ಪಕ್ಕದ ಕೊಮೊರಿನ್ ಪ್ರದೇಶದಲ್ಲಿ ಚಂಡಮಾರುತದ ಪರಿಣಾಮದಿಂದ ವಾತಾವರಣದಲ್ಲಿ ದೊಡ್ಡ ಮೋಡದ ಸಮೂಹಗಳು ಕಾಣಿಸಿಕೊಂಡಿವೆ. ಈ ಮೋಡಗಳು ಕೇರಳ, ತಮಿಳುನಾಡು ಹಾಗೂ ಕರ್ನಾಟಕದ ಕರಾವಳಿ ಭಾಗಗಳ ಮೇಲೆ ಹೆಚ್ಚಾಗಿ ವಿಸ್ತರಿಸಿದ್ದು, ಮಧ್ಯಮದಿಂದ ಭಾರೀ ಮಳೆ, ಗುಡುಗು ಮತ್ತು ಅಬ್ಬರದ ಮಳೆಗೆ ಕಾರಣವಾಗಲಿದೆ. ಕಳೆದ 24 ಗಂಟೆಗಳಲ್ಲಿ ದಕ್ಷಿಣ ತಮಿಳುನಾಡು, ಕರ್ನಾಟಕದ ಕೆಲ ಭಾಗ ಹಾಗೂ ಕೇರಳದಲ್ಲಿ ಹಗುರದಿಂದ ಮಧ್ಯಮ ಮಳೆಯಾಗಿದ್ದು, ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯೂ ದಾಖಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕೇರಳ, ತಮಿಳುನಾಡು, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಹಾಗೂ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡುಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ನೈಋತ್ಯ ಮಾನ್ಸೂನ್ ಅಂತಿಮ ಹಂತದಲ್ಲಿದೆ, ಹಾಗೂ ಈಶಾನ್ಯ ಮಾನ್ಸೂನ್ ಆಗಮನಕ್ಕೆ ಸಿದ್ಧತೆ ಆರಂಭವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !