ಹೊಸದಿಗಂತ ಡಿಜಿಟಲ್ ಡೆಸ್ಕ್:
ನೆದರ್ಲೆಂಡ್ಸ್ ವಿರುದ್ಧದ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಪರಾಮರ್ಶೆ ನಡೆಸುವಾಗ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಸೂರ್ಯಕುಮಾರ್ನ್ನು ಹೊಗಳಿ, ಕೊಹ್ಲಿ ನಿರ್ಲಕ್ಷಿಸಿದ್ದಾರೆ.
ನೆದರ್ಲೆಡ್ ವಿರುದ್ಧದ ಪಂದ್ಯದಲ್ಲಿ ಹೀರೋ ಆಗಿದ್ದು ಸೂರ್ಯಕುಮಾರ್, ಕೊಹ್ಲಿ ಅಲ್ಲ. ಬ್ಯಾಟಿಂಗ್ ಮಾಡುವಾಗ ಕೊಹ್ಲಿಗೆ ಯಾವುದೇ ಒತ್ತಡ ಇರಲಿಲ್ಲ. ಆದರೆ ಸೂರ್ಯಕುಮಾರ್ ಎಲ್ಲವನ್ನೂ ಒಬ್ಬರೇ ನಿಭಾಯಿಸಿದ್ದಾರೆ ಎಂದು ಗಂಭೀರ್ ಹೇಳಿದ್ದಾರೆ.
ಟಿ 20 ವಿಶ್ವಕಪ್ನಲ್ಲಿ ಕೊಹ್ಲಿ ಫಾರ್ಮ್ನಲ್ಲಿದ್ದಾರೆ. ಎರಡೂ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಟಿ 20 ವಿಶ್ವಕಪ್ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ೨ನೇ ಸ್ಥಾನಕ್ಕೆ ಏರಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆಗಳು ಇರುವಾಗಲೂ ಕೊಹ್ಲಿಯನ್ನು ಹೊಗಳದೇ ಸೂರ್ಯಕುಮಾರ್ ಹೊಗಳಿದ್ದೇಕೆ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ.