ಕಾಂಗ್ರೆಸ್ ಸರಕಾರಕ್ಕೆ ಸಂಕಷ್ಟ ತಂದಿಟ್ಟ ಆರನೇ ಗ್ಯಾರಂಟಿ: ನಾಳೆ ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಐದು ಗ್ಯಾರಂಟಿ ಘೋಷಿಸಿದ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಆರನೇ ಭರವಸೆ ದೊಡ್ಡ ತಲೆನೋವು ತಂದಿಟ್ಟಿದ್ದು, ನಾಳೆ ಅಂಗನವಾಡಿ (Anganawadi workers) ಕಾರ್ಯಕರ್ತೆಯರು ಪ್ರತಿಭಟನೆಗೆ ಕರೆಕೊಟ್ಟಿದ್ದಾರೆ.

ಐದು ಗ್ಯಾರಂಟಿಗಳನ್ನು ಹೇಗಾದರೂ ಮಾಡಿ ಜಾರಿ ಮಾಡಬೇಕು ಎಂದು ಹರಸಾಹಸಪಡುತ್ತಿರುವ ಸರ್ಕಾರಕ್ಕೆ ಈಗ ಅಂಗನವಾಡಿ (Anganawadi workers) ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವಧನ ಹೆಚ್ಚಳ ಮಾಡುವುದಾಗಿ ಹೇಳಿದ್ದ ಭರವಸೆ ಈಡೇರಿಸಲು ಒತ್ತಾಯ ಕೇಳಿಬರುತ್ತಿದೆ.

ಜೂನ್‌ 27ರಂದು (ಮಂಗಳವಾರ) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸಜ್ಜಾಗಿದ್ದಾರೆ. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಶನ್ (AITUC) ಈ ಪ್ರತಿಭಟನೆಗೆ ಕರೆ ನೀಡಿದೆ. ಬೆಂಗಳೂರು ಮಾತ್ರವಲ್ಲ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ಆಯೋಜಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!