ಗಂಧದಗುಡಿಯನ್ನ ಕಸಾಯಿಖಾನೆ ಮಾಡ್ತಿದೆ.. ಯಾರ ವಿರುದ್ಧ ಸಿಡಿದೆದ್ದರು ವಿಪಕ್ಷ ನಾಯಕ ಅಶೋಕ್‌?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಂಧದಗುಡಿಯನ್ನ ಕಸಾಯಿಖಾನೆ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಜ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಆರ್‌. ಅಶೋಕ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಕಿಡಿ ಕಾರಿದ್ದಾರೆ.

ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀನ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟಿರುವ ವಿಷಯ ಅತ್ಯಂತ ಆಘಾತಕಾರಿ. ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ತನ್ನದೇ ಆದ ಹೆಸರು ಮಾಡಿರುವ ಕರ್ನಾಟಕದಲ್ಲಿ ಇಂತಹ ಘಟನೆ ನಡೆದಿರುವುದು ರಾಜ್ಯಕ್ಕೆ ಕಳಂಕ ತಂದಿದೆ ಎಂದು ಪೋಸ್ಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!