ಹೊಸದಿಗಂತ ವರದಿ , ಕಿಕ್ಕೇರಿ:
ಹಾಡ ಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ ಮಹಿಳೆಯ ಕತ್ತು ಕೂಯ್ದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಇಲ್ಲಿನ ಮೈಸೂರು-ಚನ್ನಾರಾಯಪಟ್ಟಣ ರಸ್ತೆಯಲ್ಲಿರುವ ಶ್ರೀಕಾಂತ್ ಮೆಡಿಕಲ್ ಸ್ಟೋರ್ನ ಲೇ. ಶ್ರೀಕಾಂತ್ ಅವರ ಪತ್ನಿ, ಮಾಲೀಕರಾದ ಪುಷ್ಪಲತಾ (45) ಅವರೇ ಭೀಕರವಾಗಿ ಹತ್ಯೆಯಾದವರಾಗಿದ್ದಾರೆ.
ಪುಷ್ಪಲತಾ ಅವರಿಗೆೆ ಒಬ್ಬ ಪುತ್ರ ಹಾಗೂ ಒಬ್ಬಳು ಮಗಳಿದ್ದಾಳೆ. ಹತ್ಯೆಯನ್ನು ಯಾರು ಮಾಡಿದ್ದಾರೆ, ಕಾರಣ ಏನೆಂಬುದು ತಿಳಿದುಬಂದಿಲ್ಲವಾಗಿದ್ದು, ಈ ಘಟನೆಯಿಂದ ಕಿಕ್ಕೇರಿ ಜನತೆ ಬೆಚ್ಚಿಬಿದ್ದಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಮತ್ತು ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.