ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂಡ ಕೂಡಲೇ ಎಲ್ಲಾ ಇಲಾಖೆಗಳು, ನಿಗಮಗಳ ಕಾಮಗಾರಿಗಳ ಬಿಲ್ ಗೆ ತಡೆ ನೀಡಲಾಗಿತ್ತು. ಇದೀಗ ಈ ಆದೇಶವನ್ನು ಇಂದು ವಾಪಾಸ್ ಪಡೆದಿದೆ.
ಈ ಸಂಬಂಧ ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ.ಏಕ್ ರೂಪ್ ಕೌರ್ ಸುತ್ತೋಲೆ ಹೊರಡಿಸಿದ್ದು, ಎಲ್ಲಾ ಇಲಾಖೆಗಳು, ಅಧೀನಕ್ಕೊಳಪಡುವ ಕಾಮಗಾರಿ ಬಿಲ್ ಪಾವತಿಗೆ ಅನುಮತಿ ನೀಡಲಾಗಿದೆ.
ನೈಜತೆ, ನಿಯಮಾನುಸಾರ ಇದೆಯಾ ಎಂದು ಖಾತ್ರಿ ಪಡಿಸಿಕೊಂಡು, ಸಂಬಂಧಿಸಿದ ಇಲಾಖಾ ಸಚಿವರ ಅನುಮೋದನೆ ಪಡೆದು ಹಣ ಬಿಡುಗಡೆ ಮಾಡುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರ ಒತ್ತಡಕ್ಕೆ ಮಣಿದು, ಕಾಮಗಾರಿ ಬಿಲ್ ಗಳಿಗೆ ನೀಡಿದ್ದಂತ ತಡೆಯನ್ನು ವಾಪಾಸ್ ಪಡೆದಿದೆ.
ಕೆಲ ದಿನಗಳ ಹಿಂದಷ್ಟೇ ಗುತ್ತಿಗೆದಾರರ ಸಂಘದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಕಾಮಗಾರಿ ಬಿಲ್ ಬಿಡುಗಡೆ ಮನವಿ ಮಾಡಲಾಗಿತ್ತು.