ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಪ್ರಜ್ವಲ್ ರೇವಣ್ಣ ದೇಶ ತೊರೆಯುವಂತೆ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ‘ಪ್ರಜ್ವಲ್ ಪಾಸ್ ಪೋರ್ಟ್ ರದ್ದುಪಡಿಸಲು ವಿಳಂಬ ಮಾಡುತ್ತಿಲ್ಲ. ಸಾಮಾನ್ಯ ವ್ಯಕ್ತಿಯ ಪಾಸ್ಪೋರ್ಟ್ ರದ್ದುಗೊಳಿಸುವ ವಿಧಾನವೂ ಇದೆ. ಈ ಪ್ರಕ್ರಿಯೆಯನ್ನು ಮೀರಿ, ನಾವು ಏನೂ ಮಾಡಲಾಗುವುದಿಲ್ಲ ಪ್ರಧಾನಿ, ವಿದೇಶಾಂಗ ಸಚಿವರು ಸೇರಿ ಯಾರಿಗೇ ಪತ್ರ ಬರೆದರೂ ಆಗಲ್ಲ. ಯಾರ ಮೇಲೆ ಏನು ಆರೋಪ ಇದೆ, ಎಫ್ಐಆರ್ನಲ್ಲಿ ಏನಿದೆ?.
ಎಲ್ಲ ಸಮಸ್ಯೆಗಳನ್ನು ಕೇಂದ್ರ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ತಿಳಿಸಬೇಕು. ಸಿಎಂ ಸಿದ್ದರಾಮಯ್ಯ ಪತ್ರ ಬರೆದು ರಾಜಕೀಯಕ್ಕೆ ಬಂದರೆ ಹೀಗಾಗುವುದಿಲ್ಲ. ಪ್ರಜ್ವಲ್ ವಿರುದ್ಧ ಆರೋಪ ಕೇಳಿ ಬಂದಾಗಿನಿಂದಲೂ ಆತನ ಬಂಧನಕ್ಕೆ ಒತ್ತಾಯಿಸುತ್ತಲೇ ಬಂದಿದ್ದೇವೆ. ಅದರ ಬಗ್ಗೆ ಗುಟ್ಟಾಗಿ ಮಾತನಾಡಲಿಲ್ಲ. ಆದರೆ, ಕೇಂದ್ರ ಸರ್ಕಾರ ತನ್ನ ತಪ್ಪನ್ನು ಮುಚ್ಚಿಕೊಂಡಿದೆ ಎಂದು ಆರೋಪಿಸಿದರು. ದುರುದ್ದೇಶದಿಂದ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸವಾಗಿದೆ ಎಂದರು.