ಜಂಬೂ ಸವಾರಿಯಲ್ಲಿ ಗಮನ ಸೆಳೆದ ಪುನೀತ್ ರಾಜ್‌ಕುಮಾರ್ ಪ್ರತಿಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐತಿಹಾಸಿಕ ಜಂಬೂಸವಾರಿ ಇನ್ನೇನು ಕೆಲವೇ ಸಮಯ ಬಾಕಿ ಇದ್ದು, ಈ ಬಾರಿ 47 ಸ್ತಬ್ದಚಿತ್ರಗಳ ಪ್ರದರ್ಶನ ಕಾಣಲಿವೆ.
ಈ ಬಾರಿ ಸ್ತಬ್ದಚಿತ್ರಗಳ ಪ್ರದರ್ಶನದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಪ್ರತಿಮೆ ಪ್ರಮುಖ ಆಕರ್ಷಣೆಯಾಗಲಿದೆ. ಪ್ರತಿ ಜಿಲ್ಲೆಯ ವೈಶಿಷ್ಟ್ಯವನ್ನು ಸ್ತಬ್ದಚಿತ್ರಗಳ ಮೂಲಕ ಜಂಬೂಸವಾರಿಯಲ್ಲಿ ತೋರಿಸಲಾಗುತ್ತಿದೆ.

ಎರಡು ವರ್ಷದಿಂದ ಕೊರೋನಾ ಮಹಾಮಾರಿಯಿಂದ ಮೈಸೂರು ದಸರಾ ಕಳೆ ಇಲ್ಲದಂತಾಗಿತ್ತು. ಆದರೆ ಈ ಬಾರಿ ದಸರಾ ವಿಜೃಂಭಣೆಯಿಂದ ನಡೆಯುತ್ತಿದ್ದು, ಮೈಸೂರಿನಲ್ಲಿ ಪ್ರಯಾಣಿಕರ ದಂಡೇ ನೆರೆದಿದೆ. ಸಂಜೆ ವೇಳೆಗೆ ಜಂಬೂ ಸವಾರಿ ಆರಂಭವಾಗಲಿದ್ದು, ಅರಮನೆಯಿಂದ ತಿಲಕ್ ನಗರ ರಸ್ತೆವರೆಗೆ ಸ್ತಬ್ಧಚಿತ್ರ ಮೆರವಣಿಗೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!