ಮನೆ ಮುಂದೆ ನಿಂತಿದ್ದ ಹಸುವನ್ನು ಕಾರಿನಲ್ಲಿ ಹೊತ್ತೊಯ್ದ ಆಗಂತುಕರು!

ಹೊಸದಿಗಂತ ವರದಿ,ಕುಶಾಲನಗರ:

ಮನೆಯ ಮುಂದೆ ನಿಂತಿದ್ದ ಹಸುವನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿಯಾದ ಘಟನೆ ಇಲ್ಲಿಗೆ ಸಮೀಪದ ಸುಂದರನಗರ ಗ್ರಾಮದಲ್ಲಿ ನಡೆದಿದೆ.
ಹಾರಂಗಿ ರಸ್ತೆಯ ಸುಂದರನಗರದಲ್ಲಿರುವ ಅಗ್ನಿಶಾಮಕ ಠಾಣೆಯ ಎದುರು, ಜಯರಾಮ ಎಂಬವರಿಗೆ ಸೇರಿದ ಮನೆ ಮುಂದೆ ಗುರುವಾರ ರಾತ್ರಿ
ನಿಂತಿದ್ದ ಅಂದಾಜು 30 ಸಾವಿರ ರೂ. ಬೆಲೆ ಬಾಳುವ ಹಸುವನ್ನು ಸ್ಕಾರ್ಪಿಯೋ ಕಾರಿನಲ್ಲಿ ಬಂದ ಆಗಂತುಕರು ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾಗಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಘಟನಾ ಸ್ಧಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲಸೆ ಆರೋಪಿಗಳ ಪತ್ತೆಗೆ ಕ್ರಮವಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!