ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿವಿಧ ಬೇಡಿಗೆ ಈಡೇರಿಸುವಂತೆ ಮಾರ್ಚ್ 21 ರಿಂದ ಸಾರಿಗೆ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿದ್ದರು. ಇದೀಗ ವಾಪಾಸ್ ಪಡೆಯಲಾಗಿದೆ.
ಸಾರಿಗೆ ನೌಕರರ ಬೇಡಿಕೆ ಈಡೇರಿಸೋ ಸಂಬಂಧ ಇಂದು ಕೆ ಎಸ್ ಆರ್ ಟಿ ಸಿ ಎಂಡಿ ವಿ.ಅನ್ಬುಕುಮಾರ್ ನೇತೃತ್ವದಲ್ಲಿ ನೌಕರರ ಮುಖಂಡರ ಜೊತೆಗೆ ಮಹತ್ವದ ಸಭೆ ನಡೆಯಿತು.
ಈ ಸಭೆಯಲ್ಲಿ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತ ಭರವಸೆಯನ್ನು ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಮಾರ್ಚ್ 21ರಿಂದ ನಡೆಸಲು ನಿರ್ಧರಿಸಲಾಗಿದ್ದ ಅನಿರ್ಧಿಷ್ಟಾವಧಿಯ ಮುಷ್ಕರವನ್ನು ವಾಪಾಸ್ ಪಡೆಯಲಾಗಿದೆ.
ನಿನ್ನೆ ರಾಜ್ಯ ಸರ್ಕಾರ ಸಾರಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿತ್ತು. ಈ ಮೂಲಕ ನೌಕರರ ವೇತನ ಹೆಚ್ಚಳದ ಬೇಡಿಕೆಯನ್ನು ಈಡೇರಿಸಿತ್ತು. ಈ ಬೆನ್ನಲ್ಲೇ ಇಂದು ಮಾರ್ಚ್ 21ರಿಂದ ನಡೆಸಲು ನಿರ್ಧರಿಸಿದ್ದಂತ ಸಾರಿಗೆ ನೌಕರರ ಮುಷ್ಕರವನ್ನು ವಾಪಾಸ್ ಪಡೆಯಲಾಗಿದೆ.