ಹೊಸ ದಿಗಂತ ಡಿಜಿಟಲ್ ಡೆಸ್ಕ್
ಪಶ್ಚಿಮ ಬಂಗಾಳದಲ್ಲಿ ಇಂದು 152 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ.ಈ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ಆಡಳಿತಾರೂಢ ದೀದಿ ಸರಕಾರದ ವಿರುದ್ಧ ಗುಡುಗಿದ್ದಾರೆ.
ಈ ಕುರಿತು ಪೋಸ್ಟ್ ಮಾಡಿರುವ ಶಾ, ಬಂಗಾಳದಲ್ಲಿ ಟಿಎಂಸಿಯ ಭ್ರಷ್ಟಾಚಾರ ಮತ್ತು ಗೂಂಡಾಗಿರಿಯ ಸೂರ್ಯ ಮುಳುಗಿದ್ದಾನೆ ಎಂದು ಬರೆದುಕೊಂಡಿದ್ದಾರೆ.
ಬಂಗಾಳದಲ್ಲಿ ಈ ಬಾರಿ ಇತಿಹಾಸದಲ್ಲೇ ಅತೀ ಹೆಚ್ಚು ಶೇ. 91.46 ರಷ್ಟು ಮತದಾನ ನಡೆದಿದೆ. ಈ ಮೂಲಕ ಬಿಜೆಪಿಯಲ್ಲಿ ಗೆಲುವಿನ ಹೊಸ ಭರವಸೆ ಮೂಡಿದೆ.



