ಎಸಿಬಿ ರದ್ದುಗೊಳಿಸಿದ ಹೈಕೋರ್ಟ್ ವಿರುದ್ಧದ ಅರ್ಜಿ ನಿರಾಕರಿಸಿದ ಸುಪ್ರೀಂ ಕೋರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಎಸಿಬಿ ರದ್ದುಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಖಾಸಗಿ ವ್ಯಕ್ತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್​ ಮೊದಲು ಒಪ್ಪಿಗೆ ಸೂಚಿಸಿತ್ತು. ಆದ್ರೆ ಇದೀಗ ವಿಚಾರಣೆ ಕೈಗೆತ್ತಿಕೊಂಡ ಸರ್ವೋಚ್ಚ ನ್ಯಾಯಾಲಯ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದೆ.

2016ರಲ್ಲಿ ಸ್ಥಾಪಿಸಲಾದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಯನ್ನು ರದ್ದುಗೊಳಿಸುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಖಾಸಗಿ ವ್ಯಕ್ತಿ ಕನಕರಾಜು ಎಂಬುವರು ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯನ್ನು ಆಗಿನ ಮುಖ್ಯ ನ್ಯಾಯಮೂರ್ತಿ ಎನ್​ ವಿ ರಮನಣ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸಿಟಿ ರವಿಕುಮಾರ್ ಅವರ ಪೀಠದ ಮುಂದೆ ಬಂದಿತ್ತು. ಈ ಅರ್ಜಿಯನ್ನು ವಿಚಾರಣೆಗೆ ಲಿಸ್ಟ್ ಮಾಡಲು ಪೀಠ ಒಪ್ಪಿಗೆ ಸೂಚಿಸಿತ್ತು. ಆದ್ರೆ ಇಂದು ಈ ಅರ್ಜಿಯನ್ನು ಪರಿಗಣಿಸಲು ಸುಪ್ರೀಂಕೋರ್ಟ್​ ನಿರಾಕರಿಸಿದೆ.

ಅರ್ಜಿದಾರರು ತಮಗೆ ಲಂಚದ ಬೇಡಿಕೆ ಇಟ್ಟಿದ್ದ ಬೆಸ್ಕಾಂ ವಿಚಕ್ಷಣಾ ದಳ ಠಾಣೆಯ ಇಬ್ಬರು ಅಧಿಕಾರಿಗಳ ವಿರುದ್ಧ ದೂರು ನೀಡಿದ್ದರು. ಈ ಮಧ್ಯೆ ಎಸಿಬಿಯನ್ನು ರದ್ದುಗೊಳಿಸಿದ್ದ ಹೈಕೋರ್ಟ್​ ಎಲ್ಲ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ವರ್ಗಾಯಿಸಿತ್ತು. ಈ ಹಂತದಲ್ಲಿ ಎಸಿಬಿಯನ್ನು ರದ್ದುಗೊಳಿಸುವುದು ಮತ್ತು ಆ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸುವುದರಿಂದ ಆರೋಪಿಗೆ ವರದಾನವಾಗಬಹುದು ಎಂದು ಅರ್ಜಿಯಲ್ಲಿ ಹೇಳಿದ್ದನು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!