ಶಂಕಿತ ಉಗ್ರನನ್ನು ಬಂಟ್ವಾಳಕ್ಕೆ ಕರೆ ತಂದ ಪೊಲೀಸರು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಶಿವಮೊಗ್ಗದಲ್ಲಿ ಬಂಧನವಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಶಂಕಿತ ಉಗ್ರ ಮಾಜ್ ಮುನೀರ್ ಅಹ್ಮದ್ ನನ್ನು ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರು ಗ್ರಾಮಕ್ಕೆ ಬುಧವಾರ ಪೊಲೀಸರು ಕರೆ ತಂದು ಮಹಜರು ನಡೆಸಿದ್ದಾರೆ.
ತೀರ್ಥಹಳ್ಳಿ ಡಿವೈಎಸ್ಪಿ ಶಾಂತವೀರ್ ನೇತೃತ್ವದ ಅಗುಂಬೆ ಪಿಎಸ್ ಐ ಶಿವಕುಮಾರ್ ಅವರನ್ನೊಳಗೊಂಡ ಪೊಲೀಸರ ತಂಡ ಬಂಟ್ವಾಳ ಸಮೀಪದ ನಾವೂರು ಗ್ರಾಮದ ನಿರ್ಜನಪ್ರದೇಶವಾದ ಸುಲ್ತಾನ್ ಕಟ್ಟೆಯ ನಿರ್ಜನಪ್ರದೇಶಕ್ಕೆ ಆರೋಪಿಯನ್ನು ಕರೆದೊಯ್ದು ಮಹಜರನ್ನು ನಡೆಸಿದ್ದಾರೆ.
ಇಲ್ಲಿನ ಸುತ್ತಮುತ್ತಲ ಪ್ರದೇಶದಲ್ಲಿ ಸ್ಫೋಟಕಗಳನ್ನು ಬಚ್ಚಿಟ್ಟಿರುವ ಮತ್ತು ಬ್ಲಾಸ್ಟಿಂಗ್ ರಿಹರ್ಸಲ್ ಮಾಡುತ್ತಿದ್ದ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರ ತಂಡ ಸ್ಥಳ ಪರಿಶೀಲಿಸಿ ಮಹಜರು ನಡೆಸಿದೆ.
ಈ ವೇಳೆ ಶ್ವಾನ ದಳ ಮತ್ತು ಬಾಂಬ್ ಸ್ಕ್ವಾಡ್ ಕೂಡ ಕರೆತರಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!