ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಚೂರು ಜಿಲ್ಲೆಯಲ್ಲಿ ಶಾಲೆಯಲ್ಲಿ ಮಕ್ಕಳಿಗೆ ಪಾಠ ಪಾಠ ಮಾಡಿ ಬಂದು ಕುಳಿತಾಗಲೇ ಹೃದಯಾಘಾತವಾಗಿ ಶಿಕ್ಷಕ ಸಾವನ್ನಪ್ಪಿದ ಘಟನೆ ನಡೆದಿದೆ.
ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಪ್ರಭಾರ ಮುಖ್ಯ ಶಿಕ್ಷಕನಿಗೆ ಹೃದಯಘಾತ ಸಂಭವಿಸಿದ್ದು, ತಾವು ಕುಳಿತುಕೊಂಡ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿರುವ ದುರ್ಘಟನೆ ನಡೆಒದೆ.
ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಗದ್ರಟಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಪ್ರಭಾರ ಮುಖ್ಯ ಶಿಕ್ಷಕ ಸುರೇಶ (57) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ.
ಮಂಗಳವಾರ ಬೆಳಗ್ಗೆ ಮೊದಲ ತರಗತಿ ಪಾಠ ಮುಗಿಸಿ, ಇಂದು ಯಾಕೋ ತುಂಬಾ ಸುಸ್ತಾಗುತ್ತಿದೆ ಎಂದು ವಿದ್ಯಾರ್ಥಿಗಳಿಗೆ ಹೇಳಿ ಮುಖ್ಯ ಶಿಕ್ಷಕರ ಕೋಣೆಯತ್ತ ಬಂದು ತಮ್ಮ ಕುರ್ಚಿಯಲ್ಲಿ ಕುಳಿತುಕೊಂಡಿದ್ದಾರೆ.
ಇನ್ನು ಎದೆಯ ನೋವು ಕಾಣಿಸಿಕೊಂಡರೂ ಅದನ್ನು ನಿರ್ಲಕ್ಷ್ಯ ಮಾಡಿ, ಇತರೆ ದಾಖಲೆಗಳನ್ನು ಬರೆದಿಡುವ ಕಾರ್ಯಕ್ಕೆ ಮುಂದಾಗಿದ್ದಾರೆ. ಶಾಲೆಗೆ ಸಂಬಂಧಿಸಿದ ದಾಖಲೆ ಬರೆಯುವ ವೇಳೆ ಹೃದಯಘಾತ ಸಂಭವಿಸಿದೆ. ನಂತರ, ಕೆಲವೇ ಕ್ಷಣಗಳಲ್ಲಿ ಕುಳಿತ ಕುರ್ಚಿಯಲ್ಲೇ ಮುಖ್ಯ ಶಿಕ್ಷಕ ಸುರೇಶ್ ಪ್ರಾಣಬಿಟ್ಟಿದ್ದಾರೆ.