April 15, 2026
Wednesday, April 15, 2026
spot_img

ರಾಜ್ಯದಲ್ಲಿ ಇನ್ನು Solve ಆಗಿಲ್ಲ ಜಾತಿಗಣತಿಯಲ್ಲಿ ತಾಂತ್ರಿಕ ಸಮಸ್ಯೆ: ಬರೀ ಯಡವಟ್ಟೇ ಜಾಸ್ತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಜಾತಿಗಣತಿಯ ತಾಂತ್ರಿಕ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ದಾವಣಗೆರೆಯಲ್ಲಿ ಒಂದು ಕಡೆ ಭಾರೀ ಯಡವಟ್ಟಾಗಿದ್ದು, ಸಮೀಕ್ಷೆ ವೇಳೆ ಶಿಕ್ಷಕರು ಹಿಂದೂ ವ್ಯಕ್ತಿಯೊಬ್ಬರ ಆಧಾರ್‌ ನಂಬರ್‌ ಹಾಕಿದ್ರೆ ಮುಸ್ಲಿಂ ವ್ಯಕ್ತಿಗಳ ಹೆಸರು ಬರುತ್ತಿರುವುದು ಬೆಳಕಿಗೆ ಬಂದಿದೆ.

ನಗರದ ಎಂಸಿಸಿ ಬಿ ಬ್ಲಾಕ್‌ನಲ್ಲಿ ಸಮೀಕ್ಷೆ ಮಾಡುವಾಗ ಈ ರೀತಿ ಯಡವಟ್ಟಾಗಿದೆ. ವೈದ್ಯರಾದ ಹರ್ಷ ಎಂಬವರ ಮನೆಗೆ ಗಣತಿಗೆ ತೆರಳಿದ್ದಾಗ ಅವರ ಆಧಾರ್‌ ನಂಬರ್ ಹಾಕಿದ್ರೆ ಅಪೋರೀಜಾ, ಶರೀಪ್ ಬಾನು ಎಂಬ ಹೆಸರುಗಳನ್ನು ತೋರಿಸುತ್ತಿದೆ.

ಕೊನೆಗೆ ಮನೆಯ ಸದಸ್ಯರ ಒಂದೊಂದೇ ಹೆಸರು ನಮೋದಿಸಿಕೊಂಡು ಶಿಕ್ಷಕರು ಗಣತಿಯನ್ನು ಮುಗಿಸಿಕೊಂಡು ಹೋಗಿದ್ದಾರೆ. ಸಮೀಕ್ಷೆ ವೇಳೆ ಆದ ಯಡವಟ್ಟನ್ನು ಹರ್ಷ ಅವರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಹೆಸರುಗಳನ್ನು ಡಿಲೀಟ್ ಮಾಡಿಸಿ ಸಮಸ್ಯೆ ಸರಿಪಡಿಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !