ಅಪ್ಪು ಬ್ಯಾನರ್, ಕನ್ನಡಧ್ವಜ ಹರಿದ ಕಿಡಿಗೇಡಿಗಳು; ಕೊಪ್ಪಳದಲ್ಲಿ ಉದ್ವಿಗ್ನ ಸ್ಥಿತಿ

ಹೊಸದಿಗಂತ ವರದಿ, ಕೊಪ್ಪಳ
ತಾಲೂಕಿನ ಹೂವಿನಾಳ ಗ್ರಾಮದಲ್ಲಿ ಇಂದು ನಟ ದಿ.ಪುನೀತ್ ರಾಜ್ ಕುಮಾರ್ ಫೋಟೊ ಮತ್ತು ಕನ್ನಡಧ್ವಜವನ್ನು ಕಿಡಿಗೇಡಿಗಳು ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ.
ಘಟನೆಯಿಂದ ಆಕ್ರೋಶಗೊಂಡಿರುವ  ಗ್ರಾಮಸ್ಥರು ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದು, ಸ್ಥಳದಲ್ಲಿ ಉದ್ವಿಗ್ನ ನಿರ್ಮಾಣವಾಗಿದೆ.
ಕಿಡಿಗೇಡಿಗಳನ್ನು ಬಂಧಿಸುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ. ಪೊಲೀಸರು ಪರಿಸ್ಥಿತಿ ನಿಭಾಯಿಸಲು ಹರಸಾಹಸ ಪಡುತ್ತಿದ್ದಾರೆ. ಇದೀಗ ಪೊಲೀರು ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಈ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳು ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ದುರಾದೃಷ್ಟವಶಾತ್‌ ಈ ದಿನವೇ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!