ಅಭಿಮಾನಿಗಳ ದಾರುಣ ಸಾವು: ಸಾಂತ್ವನ ಹೇಳಲು ಗದಗಕ್ಕೆ ಬಂದ ನಟ ಯಶ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಸಾವನ್ನಪ್ಪಿದ್ದಾರೆ.

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಸುದ್ದಿ ತಿಳಿದಿದೆ ಕೂಡಲೇ ಗೋವಾದಿಂದ ಹುಬ್ಬಳ್ಳಿ ಏರ್ ಪೋರ್ಟ್ ಗೆ ಆಗಮಿಸಿದ್ದು, ನಂತರ ಅಲ್ಲಿಂದ ಕಾರಿನಲ್ಲಿ ಗದಗದತ್ತ ಪ್ರಯಾಣ ಬೆಳೆಸಿದ್ದಾರೆ.

1 ಗಂಟೆಯೊಳಗೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ನಟ ಯಶ್ ಭೇಟಿ ನೀಡಲಿದ್ದಾರೆ. ನಟ ಯಶ್ ಅವರನ್ನು ನೋಡಲು ಗ್ರಾಮದಲ್ಲಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದಾರೆ.

ಗ್ರಾಮಕ್ಕೆ ನಟ ಯಶ್ ಭೇಟಿ ನೀಡುವ ಹಿನ್ನೆಲೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ಬಂದೋಬಸ್ತ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!