ಟೀ ಕುಡಿಯೋಕೆ ಬೆಂಗಳೂರಿನಿಂದ ಮಾಗಡಿಗೆ ಬಂದಿದ್ದ ಸ್ನೇಹಿತರ ದುರಂತ ಅಂತ್ಯ: ಆಗಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಇನ್ನೋವಾ ಕಾರು ಪಲ್ಟಿಯಾಗಿ ಇಬ್ಬರು ಸಾವಿಗೀಡಾದ ಘಟನೆ ಮಾಗಡಿಯ ತಾವರೆಕೆರೆ ರಸ್ತೆಯ ಜನತಾ ಕಾಲೋನಿ ಬಳಿ ನಡೆದಿದೆ.

ಮೃತರನ್ನು ಬೆಂಗಳೂರು ಮೂಲದ ಮಂಜು (31) ಹಾಗೂ ಕಿರಣ್ (30) ಎಂದು ಗುರುತಿಸಲಾಗಿದೆ. ಕಾರಲ್ಲಿ 8 ಜನ ಸ್ನೇಹಿತರು ಹೊಸ ವರ್ಷದ ಪಾರ್ಟಿ ಮೂಡಲ್ಲಿ ಮುಂಜಾನೆ 3 ಗಂಟೆಗೆ ಟೀ ಕುಡಿಯೋಕೆ ಬೆಂಗಳೂರಿಂದ ಮಾಗಡಿಗೆ ಬಂದಿದ್ದರು. ಟೀ ಕುಡಿದು ವಾಪಾಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದ 6 ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನ ಮಾಗಡಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಮಾಗಡಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!