ಹೊಸದಿಗಂತ ವರದಿ, ವಿಜಯಪುರ:
ದೇವರ ಪಲ್ಲಕ್ಕಿಯೊಂದಿಗೆ ನದಿಗೆ ಸ್ನಾನ ಮಾಡಲು ಹೋದ ವೇಳೆ ಇಬ್ಬರು ಬಾಲಕರು ನೀರುಪಾಲಾದ ಘಟನೆ ಜಿಲ್ಲೆಯ ಕೊಲ್ಹಾರ ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಕಾರಜೋಳ ಗ್ರಾಮದ ಸುದೀಪ ರಾಜಕುಮಾರ ದೊಡ್ಡಮನಿ (15), ಶ್ರೀಧರ ಶಿವಪ್ಪ ದೊಡ್ಡಮನಿ (10) ಎಂದು ಗುರುತಿಸಲಾಗಿದೆ.
ಯುಗಾದಿ ಅಮಾವಾಸ್ಯೆ ನಿಮಿತ್ತ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದ ಹುಚ್ಚಮ್ಮ ದೇವಿ ಜಾತ್ರೋತ್ಸವ ಹಿನ್ನೆಲೆ ಕಾರಜೋಳ ಗ್ರಾಮದಿಂದ ಕೃಷ್ಣಾ ನದಿಗೆ ದೇವಿಯ ಪಲ್ಲಕ್ಕಿ ಹೊತ್ತು, ದೇವಿಯ ಸ್ನಾನ ಮಾಡಿಸಿಕೊಂಡು ಹೋಗಲು ಗ್ರಾಮಸ್ಥರೊಂದಿಗೆ ಮೃತಬಾಲಕರು ತಮ್ಮ ತಂದೆ- ತಾಯಿಗಳ ಜೊತೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ.
ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.