ಬೆಂಗಳೂರಿನಲ್ಲಿ ಆಯೋಜನೆಗೊಂಡಿದ್ದ ವೀರ್‌ ದಾಸ್‌ ಹಾಸ್ಯ ಕಾರ್ಯಕ್ರಮ ರದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಮಲ್ಲೇಶ್ವರದಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಇಂದು ನಡೆಯಬೇಕಿದ್ದ ವೀರ್ ದಾಸ್(Vir Das) ಹಾಸ್ಯ ಕಾರ್ಯಕ್ರಮ ಕೊನೆಗೂ ರದ್ದಾಗಿದೆ.

ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಆಯೋಜಕರು ಹಾಸ್ಯಕಾರ್ಯಕ್ರಮ ರದ್ದು ಮಾಡುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ವೀರ್ ದಾಸ್ಅಮೆರಿಕದಲ್ಲಿ ಭಾರತದ ಬಗ್ಗೆ ಅತ್ಯಂತ ಕೆಟ್ಟದಾಗಿ ಹಾಸ್ಯ ಮಾಡಿ ಅವಹೇಳನ ಮಾಡಿದ್ದಾನೆ. ಈ ಕಾರಣಕ್ಕಾಗಿ ಮುಂಬೈ ಪೋಲಿಸರು ಇವನ ಮೇಲೆ ಪ್ರಕರಣವನ್ನು ದಾಖಲಿಸಿದ್ದರು. ವಿದೇಶದಲ್ಲಿ ಭಾರತದ ಪ್ರಧಾನಿ ಭಾರತದ ಮಹಿಳೆಯರ ವಿರುದ್ಧ ಮತ್ತು ಭಾರತದ ಘನತೆಯ ಬಗ್ಗೆ ಅತ್ಯಂತ ಕೆಟ್ಟದಾಗಿ ಅಪಮಾನ ಮಾಡಿದ ವ್ಯಕ್ತಿಯ ಕಾರ್ಯಕ್ರಮಕ್ಕೆ ನಮ್ಮ ರಾಜ್ಯದಲ್ಲಿ ಅವಕಾಶ ಕೊಡಬಾರದು ಎಂದು ಪ್ರತಿಭಟನೆ ನಡೆಸಿದ್ದಾರೆ.

ವೀರ್ ದಾಸ್ ತಮ್ಮ ವಿವಾದಾತ್ಮಕ ಸಾಮಾಜಿಕ ವ್ಯಾಖ್ಯಾನಗಳಿಗೆ ಹೆಸರುವಾಸಿಯಾಗಿದ್ದಾರೆ . ಅವರ ಹಿಂದಿನ ಹಿನ್ನೆಲೆಯನ್ನು ಗಮನದಲ್ಲಿಟ್ಟುಕೊಂಡು ಧಾರ್ಮಿಕವಾಗಿ ಸೂಕ್ಷ್ಮವಾಗಿರುವ ಬೆಂಗಳೂರಿನಂತಹ ಪ್ರದೇಶಗಳಲ್ಲಿ ಅವರ ಹಾಸ್ಯ ಪ್ರದರ್ಶನವನ್ನು ರದ್ದುಗೊಳಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿ ಒತ್ತಾಯಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!