ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನವರಿ ಮಧ್ಯಂತರದಲ್ಲಿ ವಿಶ್ವಪ್ರಸಿದ್ಧ ಹಂಪಿ ಉತ್ಸವ ನಡೆಸಲು ವಿಜಯನಗರ ಜಿಲ್ಲಾಡಳಿತ ಮಂಡಳಿ ನಿರ್ಧರಿಸಿದೆ. ಜನವರಿ 6 ರಂದು ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ದಿನವೇ ಹಂಪಿ ಉತ್ಸವಕ್ಕೂ ಚಾಲನೆ ನೀಡುವ ಆಲೋಚನೆ ಮಾಡಲಾಗಿತ್ತು. ಆದರೆ ಈ ನಿರ್ಧಾರ ಕೈಬಿಟ್ಟಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ದಿನಾಂಕ ಪ್ರಕಟವಾಗಲಿದೆ.
ಕೋವಿಡ್ ಕಾರಣದಿಂದ ಅದ್ಧೂರಿಯಾಗಿ ಕಾರ್ಯಕ್ರಮ ನಡೆಸಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ವಿಜೃಂಭಣೆಯ ಹಂಪಿ ಉತ್ಸವ ನಡೆಸಲಾಗುವುದು. 1980ರ ದಶಕದಲ್ಲಿ ಮಾಜಿ ಡಿಸಿಎಂ ಎಂ.ಪಿ.ಪ್ರಕಾಶ್ ಅವರು ಮೊದಲ ಬಾರಿಗೆ ಹಂಪಿ ಉತ್ಸವ ಆರಂಭಿಸಿದರು.