ಉಮರಾಣಿ ಗ್ರಾಮದಲ್ಲಿ ಕಳ್ಳತನ: 40 ಗ್ರಾಂ ಚಿನ್ನಾಭರಣ, 50 ಸಾವಿರ ನಗದು ಕದ್ದು ಪರಾರಿಯಾದ ಕಳ್ಳರು

ಹೊಸದಿಗಂತ ವರದಿ ವಿಜಯಪುರ:
ಜಿಲ್ಲೆಯ ಚಡಚಣ ತಾಲೂಕಿನ ಉಮರಾಣಿ ಗ್ರಾಮದ ಮೂರು ಮನೆಗಳಲ್ಲಿ ಸರಣಿ ಕಳ್ಳತನವಾಗಿರುವ ಘಟನೆ ನಡೆದಿದೆ.

ಇಲ್ಲಿನ ಸದಾಶಿವ, ಜಗದೇವ ಹಾಗೂ ಮಲ್ಲಯ್ಯ‌ ಎಂಬವರ ಮನೆಗಳಲ್ಲಿ 40 ಗ್ರಾಂ ಚಿನ್ನಾಭರಣ ಹಾಗೂ 50 ಸಾವಿರ ರೂ. ನಗದು ಕಳ್ಳತನ ಮಾಡಿಕೊಂಡು ಕಳ್ಳರು ಪರಾರಿಯಾಗಿದ್ದಾರೆ.ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೋಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!